TOP STORIES:

FOLLOW US

ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್


ಇನ್ನು ಯಾವತ್ತೂ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ʼಲಾಕ್‌ಡೌನ್‌ ಕಳೆದುಹೋಗಿರುವ ನೀತಿ. ಆರಂಭದ ಹಂತದಲ್ಲಿ ಕೋವಿಡ್‌ ಸೋಂಕು, ವೈರಾಣುವಿನ ಗುಣ ಮತ್ತು ಸ್ವಭಾವ, ಚಿಕಿತ್ಸಾ ವಿಧಾನ ಯಾವುದೂ ಗೊತ್ತಿರಲಿಲ್ಲ. ಆಗ ಅನುಭವದ ಕೊರತೆಯಿಂದ ಲಾಕ್‌ಡೌನ್‌ ಜಾರಿಗೊಳಿಸಿದ್ದೆವು. ಇನ್ನು ಹಾಗಾಗುವುದಿಲ್ಲʼ ಎಂದರು.

ಎರಡು ವರ್ಷಗಳ ಅನುಭವದಿಂದ ಕೋವಿಡ್‌ ನಿಯಂತ್ರಣ ಮತ್ತು ಚಿಕಿತ್ಸೆಯ ಕುರಿತು ಅರಿವು ಇದೆ. ಈಗ ಕೋವಿಡ್‌ ಹರಡುವುದನ್ನು ಲಾಕ್‌ಡೌನ್‌ ಜಾರಿಗೊಳಿಸುವುದರಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಲಸಿಕೆ ಮತ್ತು ಮುನ್ನೆಚ್ಚರಿಕೆಯಿಂದ ಮಾತ್ರವೇ ಕೋವಿಡ್‌ ನಿಯಂತ್ರಣ ಸಾಧ್ಯ ಎಂದು ಹೇಳಿದರು.

ʼಓಮೈಕ್ರಾನ್‌ ತಳಿಯ ಕೊರೊನಾ ವೈರಾಣುವಿನ ಸೋಂಕು ಹರಡದಂತೆ ತಡೆಯುವುದು ಅಸಾಧ್ಯ. ಸಹಜವಾಗಿಯೇ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ. ಆದರೆ, ಯಾವುದೇ ತೊಂದರೆ ಆಗುವುದಿಲ್ಲ. ಜನರು ಹೆಚ್ಚು ಮುನ್ನೆಚ್ಚರಿಕೆಯಿಂದ ಇರಬೇಕುʼ ಎಂದು ಸುಧಾಕರ್‌ ತಿಳಿಸಿದರು.

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ದೃಢಪ್ರಮಾಣ ದರ ಶೇ 3.95 ತಲುಪಿದೆ. ಈ ಪ್ರಮಾಣ ಇನ್ನಷ್ಟು ಏರಿಕೆಯಾಗಲಿದೆ. ಕೋವಿಡ್‌ ನಿಯಂತ್ರಣ ಕುರಿತು ರಾಜ್ಯಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗುವುದು. ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಲಸಿಕೆ ಪಡೆಯುವುದರಿಂದ ಮಾತ್ರ ಕೋವಿಡ್‌ನಿಂದ ರಕ್ಷಣೆ ಸಾಧ್ಯ. ಲಸಿಕೆ ಪಡೆದವರಲ್ಲಿ ಸೋಂಕಿನ ತೀವ್ರತೆ ಕಡಿಮೆ ಇರಲಿದೆ ಮತ್ತು ಸಾವಿನಿಂದಲೂ ಪಾರಾಗಬಹುದು. ಎಲ್ಲರೂ ಲಸಿಕೆ ಪಡೆಯುವ ಮೂಲಕ ಕೋವಿಡ್‌ ವಿರುದ್ಧದ ಹೋರಾಟಕ್ಕೆ ಸಹಕಾರ ನೀಡಬೇಕು ಎಂದು ಆರೋಗ್ಯ ಸಚಿವರು ಮನವಿ ಮಾಡಿದರು.

ಇಂದು ಸಭೆ: ಕೋವಿಡ್‌ ನಿಯಂತ್ರಣ ಮತ್ತು ಚಿಕಿತ್ಸಾ ವ್ಯವಸ್ಥೆ ಕುರಿತು ಚರ್ಚಿಸಲು ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಧ್ಯಾಹ್ನ ಉನ್ನತ ಮಟ್ಟದ ಸಭೆ ನಡೆಯಲಿದೆ. ರಾಜ್ಯಮಟ್ಟದ ಕೋವಿಡ್‌ ಸಲಹಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.


Share:

More Posts

Category

Send Us A Message

Related Posts

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share       ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »