TOP STORIES:

FOLLOW US

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ಶೋಧನ್ ಕುಮಾರ್ ಮೂಡುಬೆಟ್ಟು


ಕರಾಟೆಯ‌ ಸವ್ಯಸಾಚಿ ಶೋಧನ್ ಕುಮಾರ್

  ಮೂಡುಬೆಟ್ಟು ಶ್ರೀ ಶ್ರೀಧರ ಪೂಜಾರಿ ಹಾಗೂ ಶ್ರೀಮತಿ ಇಂದಿರಾ ದಂಪತಿಯ ಮಗನಾಗಿ ಜನಿಸಿದ ಶೋಧನ್ ಕುಮಾರ್ಬಾಲ್ಯದಿಂದಲೇ ಕರಾಟೆ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಪ್ರತಿಭೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ವಳಕಾಡು ಶಾಲೆ, ಶ್ಯಾಮಿಲಿ ಪದವಿಪೂರ್ವ ಕಾಲೇಜು ಮತ್ತು ಪೂರ್ಣ ಪ್ರಜ್ಞಾ ಕಾಲೇಜು ಪದವಿ ಶಿಕ್ಷಣ ಪೂರೈಸಿ ಶೈಕ್ಷಣಿಕವಾಗಿಯೂಕ್ರೀಯಾಶೀಲವಾಗಿದ್ದ ಶೋಧನ್, ಅಂತಾರಾಷ್ಟ್ರೀಯ ಕರಾಟೆ ಪಟು ಪರ್ಕಳ ಪ್ರವೀಣಾ ಸುವರ್ಣರವರ ಕರಾಟೆ ಗರಡಿಯಲ್ಲಿ ಪಳಗಿಸಾರ್ವಜನಿಕ ಶಿಕ್ಷಣ ಇಲಾಖೆ ಕರಾಟೆ ಸ್ಪರ್ಧೆಯಲ್ಲಿ ಅನೇಕ ಪ್ರಶಿಸ್ತಿಗಳಿಸಿದ್ದಾರೆ. ತಮಿಳುನಾಡು ಚೆನೈನಲ್ಲಿ ಅಖಿಲ ಭಾರತವಿಶ್ವವಿದ್ಯಾನಿಲಯದ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ ಅಮೋಘ ಸಾಧನೆಗೈದಿದ್ದಾರೆ.

ಇವರು ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಎಲೈಡ್ ಆರ್ಟ್ಸ್ ಸಂಸ್ಥೆಯಿಂದ ಅತ್ಯುತ್ತಮ ಶ್ರೇಣಿಯಲ್ಲಿ ಬ್ಲ್ಯಾಕ್ ಬೆಲ್ಟ್ ಪದವಿಪಡೆದಿದ್ದಾರೆ. ಇದುವರೆಗೆ ಉಡುಪಿ, ಮಂಗಳೂರು, ಮೈಸೂರು, ಬೆಳಗಾವಿ, ಗದಗ, ಶಿವಮೊಗ್ಗ, ಧಾರವಾಡ, ಬೆಂಗಳೂರು, ಕೇರಳ, ಹೈದರಾಬಾದ್, ತಮಿಳು ನಾಡು, ರಾಜ್ಯ, ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗಳಲ್ಲಿ ನೂರಕ್ಕೂ ಮಿಕ್ಕಿ ಪದಕಗಳನ್ನು ಜಯಿಸಿರುತ್ತಾರೆ. ಅತೀ ಕಿರಿಯ ವಯಸ್ಸಿನಲ್ಲಿ  ಪುರುಷರ ವಿಭಾಗದ 9 ಗ್ರ್ಯಾಂಡ್ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ವಿಜೇತರಾಗಿದ್ದಾರೆ. 2 ಬಾರಿಒಂದೇ ಸ್ಪರ್ಧೆಯಲ್ಲಿ ಕಟಾ ಹಾಗೂ ಕುಮಿಟೆ ವಿಭಾಗದ ಎರಡೂ ಗ್ರ್ಯಾಂಡ್ ಚಾಂಪಿಯನ್ ಶಿಪ್ ಜಯಿಸಿ ಕರಾಟೆ ಐತಿಹಾಸಿಕ ದಾಖಲೆಮಾಡಿದ್ದಾರೆ. ಕರ್ನಾಟಕ ಕರಾಟೆ ಲೀಗ್ 2019 ಮೈಸೂರು ಟೈಗರ್ಸ್ ಪ್ರತಿನಿಧಿಯಾಗಿ ಸ್ಪರ್ಧೆಯಲ್ಲಿ ಕ್ರೀಡೆಯ ಅತ್ಯುತ್ತಮ ಆಟಗಾರಪ್ರಶಸ್ತಿ ಜಯಿಸಿರುತ್ತಾರೆ. ಕರಾಟೆ ಇಂಡಿಯಾ ಆರ್ಗನೈಜೇಷನ್ ರಾಜ್ಯ, ದಕ್ಷಿಣ ಭಾರತ ಪ್ರಾಂತ್ಯ ಪ್ರಶಸ್ತಿ ಜಯಿಸಿ ಇದೀಗ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರ ವಿಜಯಯಾತ್ರೆ ಹೀಗೆ ನಿರಂತರವಾಗಿ ಸಾಗಲಿ. ಶುಭವಾಗಲಿ..


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »