TOP STORIES:

ರೂಬಿಕ್ಸ್ ಕ್ಯೂಬ್ ಮಾಯಾಗಾರ – ಮಹೇಶ್ ಮಲ್ಪೆ


ರೂಬಿಕ್ಸ್ ಕ್ಯೂಬ್ ಮಾಯಾಗಾರಮಹೇಶ್ ಮಲ್ಪೆ

ತನ್ನೊಳಗೆ ಹುದುಗಿರುವ ಕಲೆಯನ್ನು ಗುರುತಿಸಿ, ದೊರೆತ ಅವಕಾಶಗಳನ್ನು, ವೇದಿಕೆಗಳನ್ನು ಉಪಯೋಗಿಸಿಕೊಂಡು ಸಾಧನೆಯಹಾದಿಯಲಿ ಮಿಂಚುತ್ತಿರುವ ಬಹುಮುಖ ಪ್ರತಿಭೆಯ ಯುವ ಕಲಾವಿದ ಮಹೇಶ್ ಮಲ್ಪೆ.

    ಉಡುಪಿ ಜಿಲ್ಲೆಯ ಮಲ್ಪೆಯವರಾದ ಇವರು ಶೇಖರ್ ಪೂಜಾರಿ ಹಾಗು ಶ್ರೀಮತಿ ಮೀನಾಕ್ಷಿ ದಂಪತಿಗಳ ಮಗ. ಪ್ರಸ್ತುತಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮಣಿಪಾಲ್ ಯೂನಿವರ್ಸಲ್ ಪ್ರೆಸ್ ಡಿಪಾರ್ಟ್ಮೆಂಟ್ನಲ್ಲಿ ಮಾರ್ಕೆಟಿಂಗ್ಹಾಗು ಫೀಲ್ಡ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಆದಿ ಉಡುಪಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಪ್ರೌಢ ಶಿಕ್ಷಣವನ್ನು ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆ ಮಲ್ಪೆಯಲ್ಲಿ ಪಡೆದರು. ಶ್ಯಾಮಿಲಿ ಕಾಲೇಜಿನಲ್ಲಿ ಪದವಿ ಪೂರ್ವಶಿಕ್ಷಣ ಹಾಗು ಉಪೇಂದ್ರ ಪೈ ಮೆಮೊರಿಯಲ್  ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರೈಸಿದರು.

ನಟನೆಯಲ್ಲಿ ಅಪಾರ ಆಸಕ್ತಿಯುಳ್ಳ ಇವರು ರಂಗಭೂಮಿ (ರಿ.) ಉಡುಪಿ ಕಿರ್ದಾರ್ ಥಿಯೆಟರ್ ಗ್ರೂಪ್, ವಿ ಆರ್ ಫ್ರೆಂಡ್ಸ್ ಸಾಸ್ತಾನತಂಡದ ಅನೇಕ ನಾಟಕಗಳಲ್ಲಿ ಭಾಗವಹಿಸಿದ್ದಾರೆ. ನಾಟಕ ನಿರ್ದೇಶಕರು ಆಗಿದ್ದು ನಾಟಕ ತರಬೇತಿಯನ್ನು ನೀಡುತ್ತಿದ್ದಾರೆ. ರಾಜ್ಯಹಾಗು ರಾಷ್ಟ್ರ ಮಟ್ಟದ ಕವಿಗೋಷ್ಟಿಯಲ್ಲಿ ಭಾಗವಹಿಸಿದ್ದಾರೆ. ಕವನ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದ ಬಹುಮಾನ ಪಡೆದಿದ್ದಾರೆ.

ಎಲ್ಲದಕ್ಕೂ ಒಂದು ಆರಂಭ ಇದ್ದೇ ಇರುತ್ತದೆ ಎಂಬಂತೆ ಶಾಲಾ ದಿನಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು  ಪೆನ್, ಪೆನ್ಸಿಲ್ಬಳಕೆಯಿಲ್ಲದೆ ಉಪ್ಪು ಮತ್ತು ಬಣ್ಣಗಳನ್ನು ಬಳಸಿ ಮಾಡಿದ ಭಾರತ ನಕ್ಷೆಗೆ ದೊರೆತ ಪ್ರೋತ್ಸಾಹ ಮುಂದೆ ಇವರು ಇನ್ನಿತರ ಬೇರೆ ಬೇರೆವಸ್ತುಗಳನ್ನು ಉಪಯೋಗಿಸಿಕೊಂಡು ಚಿತ್ರ ನಿರ್ಮಾಣ ಮಾಡುವ  ಯೋಜನೆಗೆ ದಾರಿಯಾಯಿತು ಎನ್ನುತ್ತಾರೆ. ಪದವಿ ಪೂರ್ವಶಿಕ್ಷಣದ ಅವಧಿಯಲ್ಲಿ ರೂಬಿಕ್ಸ್ ಕ್ಯೂಬ್ ಸರಿಪಡಿಸಲು ಮೊದಲು ಪ್ರಯತ್ನಿಸಲು ಆರಂಭಿಸಿದ್ದು ಈಗ ಕೇವಲ 35 ರಿಂದ 45 ಸೆಕೆಂಡ್ಗಳಲ್ಲಿ ರೂಬಿಕ್ಸ್ ಕ್ಯೂಬ್ ಸರಿಪಡಿಸುತ್ತಾರೆ. ಫೋಟೋ ಶಾಪ್ ಕೆಲಸ ಮಾಡುತ್ತಿರುವಾಗ ಫೋಟೋದಲ್ಲಿರುವ ಸಣ್ಣ ಸಣ್ಣ ಫಿಕ್ಸೆಲ್ಗಳನ್ನು ಗಮನಿಸಿದ ಇವರು ಫಿಕ್ಸೆಲ್  ಆರ್ಟ್ ನಲ್ಲಿ ವಿಶೇಷ ಆಸಕ್ತಿ ಬೆಳೆಸಿದರು. ಈಗ ಫಿಕ್ಸೆಲ್ ಕಾರ್ನರ್ ಸಂಸ್ಥೆಯರೂವಾರಿಯಾಗಿದ್ದಾರೆ. ತನ್ನ ಕಲ್ಪನೆಯೊಳಗಿನ ಚಿತ್ರಗಳಿಗೆ ರೂಬಿಕ್ಸ್ , ಪುಸ್ತಕ, ಗ್ರಾಫ್ ಶೀಟ್ ಹೀಗೆ ಇನ್ನಿತರ ವಸ್ತುಗಳನ್ನು ಬಳಸಿಚಿತ್ರಿಸಿ ಅದಕ್ಕೆ ಕಲಾತ್ಮಕವಾಗಿ ಜೀವ ನೀಡುವ ವಿಶೇಷ ಕಲೆ ಇವರದ್ದಾಗಿದೆ. ಕೋಟಿ ಚೆನ್ನಯ ಹಾಗು ಪ್ರಧಾನ ಮಂತ್ರಿ ನರೇಂದ್ರಮೋದಿಯವರ ಪ್ರತಿರೂಪವನ್ನು  1,500 ರೂಬಿಕ್ಸ್ ಕ್ಯೂಬ್ ನಿಂದ ರಚಿಸಿ ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿದ್ದಾರೆ. ನೆಸ್ಟ್ಲೆ ಕಂಪೆನಿಆಯೋಜಿಸಿದ್ದ ರಾಷ್ಟ್ರಮಟ್ಟದ 2020 ಮಂಚ್ ಸ್ಟಾರ್ ಪ್ರತಿಭಾ ಪ್ರದರ್ಶನದಲ್ಲಿ 1,300 ರೂಬಿಕ್ಸ್ ಕ್ಯೂಬ್ ನಲ್ಲಿ ಕಲಾಕೃತಿಯೊಂದನ್ನುರಚಿಸಿದರು. ವಿಶಿಷ್ಟ ಸಾಧನೆಗೆ ಪ್ರಥಮ ಬಹುಮಾನದೊಂದಿಗೆ 5ಲಕ್ಷ ಬಹುಮಾನವನ್ನು ಗೆದ್ದಿರುವ ಹೆಗ್ಗಳಿಕೆ ಇವರದ್ದಾಗಿದೆ. ಮಾರ್ಚ್ 2021ರಂದು ನಡೆದ ರೆಡ್ ಎಫ್ ಎಮ್ ಹಾಗು ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ನಡೆಸಿದ ಟ್ಯಾಲೆಂಟ್ ಅನ್ ಲಾಕ್ಡ್ಆನ್ಲೈನ್ ಸ್ಪರ್ಧೆಯಲ್ಲಿ ಭಾರತದಾದ್ಯಂತ 56,000 ಸ್ಪರ್ಧಿಗಳು ಭಾಗವಹಿಸಿದ್ದು ಇದರಲ್ಲಿ ಮಹೇಶ್ 1,300 ಕ್ಕೂ ಹೆಚ್ಚು ರೂಬಿಕ್ಸ್ಕ್ಯೂಬ್ ನಲ್ಲಿ ಇರ್ಫಾನ್ ಖಾನ್ ರವರ ಭಾವಚಿತ್ರ ರಚಿಸಿ ಪ್ರಥಮ ಬಹುಮಾನವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ತನ್ನ ವಿಶೇಷ ಪ್ರತಿಭೆಯನ್ನು ಕೇವಲ ತನಗೆ ಮಾತ್ರ ಸೀಮಿತಗೊಳಿಸದೆ ಅನೇಕ ಸಂಸ್ಥೆಗಳಲ್ಲಿ, ಶಾಲೆಗಳಲ್ಲಿ ರೂಬಿಕ್ಸ್ ಕ್ಯೂಬ್ತರಬೇತಿಯನ್ನು, ಕಾರ್ಯಗಾರವನ್ನು ಮಾಡುತ್ತಿದ್ದಾರೆ. ಇಲ್ಲಿ ರೂಬಿಕ್ಸ್ ಕ್ಯೂಬ್ ಸರಿಪಡಿಸುವ ಜೊತೆಗೆ ಜೀವನ ಪಾಠವನ್ನುಹೇಳುವುದು ಇವರ ವಿಶೇಷತೆಯಾಗಿದೆ.

ನಟನೆ, ಫೋಟೋಗ್ರಫಿ, ಹಾಡುಗಾರಿಕೆ, ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿದ್ದು, ತಮ್ಮ ರೂಬಿಕ್ಸ್ ಕ್ಯೂಬ್ ಮತ್ತು ಮೊಸೈಕ್ ಆರ್ಟ್ಎರಡು ಕಲೆಯನ್ನು ಸೇರಿಸಿ ಗಿನ್ನಿಸ್ ರೆಕಾರ್ಡ್ ಮಾಡುವ ಕನಸನ್ನು ಹೊಂದಿದ್ದಾರೆ. ಸತತ ಪರಿಶ್ರಮ, ಪ್ರಯತ್ನದೊಂದಿಗಿನ ಇವರ ಉತ್ಸಾಹಿ ಹೆಜ್ಜೆಗಳು ಯಶಸ್ಸನ್ನು ಪಡೆಯಲಿ.

✍️ನಳಿನಿ ಎಸ್ ಸುವರ್ಣ

ಆಳ್ವಾಸ್ ಕಾಲೇಜು ಮೂಡುಬಿದಿರೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »