TOP STORIES:

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ ಅಮರ್ ರಹೇ


ಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿ೦ಜ.

ನಮ್ಮನ್ನು ಅಗಲಿದ ಸಂತೋಷ್ ಗೆ

ಇದು ಅಕ್ಷರದ ನಮನ  ಅಷ್ಟೇ.

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸೌಂದರ್ಯವನ್ನು ನೋಡಿದಾಗ ಯಾರನ್ನು ಮೂಕವಿಸ್ಮಿತರನ್ನಾಗಿಸುತ್ತದೆ. ಅಂತಹ ಸುಂದರ ದೇವಸ್ಥಾನದನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ. ಕೆಲಸವನ್ನು ನಿಷ್ಠೆಯಿಂದ, ಭಕ್ತಿಯಿಂದ ಹಾಗೂಪ್ರಾಮಾಣಿಕತೆಯಿಂದ ಮಾಡಿದ ವ್ಯಕ್ತಿ ಸಂತೋಷ್.

ಅವರು ಕೋಟಿಚೆನ್ನಯ್ಯ , ದೇಯಿ ಬೈದೆತಿ ಬಗ್ಗೆ ಅಧ್ಯಯನ ಮಾಡಿದ್ದರು. ತಜ್ಞರೊಂದಿಗೆ ಸಮಾಲೋಚನೆ ಮಾಡಿದ್ದರು. ಕಾರಣದಿಂದಲೇ ಸರ್ವರೂ ಮೆಚ್ಚುವ ದೇವಸ್ಥಾನದ ನಿರ್ಮಾಣದ ಆರ್ಕಿಟೆಕ್ಚರ್ ಆಗಿ ಅವರು ಯಶಸ್ವಿಯಾಗಿದ್ದರು.

ಅದು ಅಲ್ಲದೆ ಗೆಜ್ಜೆ ಗಿರಿಯ ಮೂಲಕ ಸಮಾಜಕ್ಕೆ ಕೊಡುಗೆ ಕೊಡಬೇಕು ಎಂಬ ಪ್ರಾಮಾಣಿಕ ಆಸೆ ಅವರಲ್ಲಿ ಇತ್ತು. ಮರಣಹೊಂದುವ ಎರಡು ದಿವಸದ ಮುಂದೆ ಅವರೊಂದಿಗೆ ಮಾತನಾಡಲು ಬಂದ ಕ್ಷೇತ್ರದ ಪದಾಧಿಕಾರಿ ಹಾಗೂ ಸಲಹೆಗಾರ ರಲ್ಲಿ ವಿಷಯವನ್ನು ಪ್ರಸ್ತಾಪಿಸಿದ್ದರು. ಅಂದರೆ ಗೆಜ್ಜೆಗಿರಿ ಬಗ್ಗೆ ಅವರಿಗಿದ್ದ ಕನಸು, ಆಶಯ ಅದನ್ನು ಶಬ್ದಗಳಲ್ಲಿ ವರ್ಣಿಸಲುಅಸಾಧ್ಯ.

ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳ, ಉದ್ಯೋಗ ದೊರಕಿಸುವ ಕಾರ್ಯಕ್ರಮಗಳ

ಮೂಲಕ ಗೆಜ್ಜೆಗಿರಿಯ ಸ್ಥಾಪನೆಯ ನಿಜವಾದ ಉದ್ದೇಶವನ್ನು ಹಾಗೂ ಕೋಟಿಚೆನ್ನಯರ ಆಶಯಗಳನ್ನು ಅನುಷ್ಠಾನಿಸಲು , ಮೂಲಕ

ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬ ಸ್ಪಷ್ಟ ಕಲ್ಪನೆ ಹೊಂದಿದ್ದ ಸಂತೋಷ್ ನಮ್ಮ ಜೊತೆ ಇಲ್ಲ.

ಅವರೊಬ್ಬ ಕ್ಷೇತ್ರದ ಆರ್ಕಿಟೆಕ್ಚರ್ ಮಾತ್ರ ಆಗಿರಲಿಲ್ಲ, ಅವರು ಕ್ಷೇತ್ರದ ಹಿನ್ನೆಲೆಯ  ಬೌದ್ಧಿಕ ಶಕ್ತಿ ಕೂಡ ಆಗಿದ್ದರು.

ಇಂತಹ ಸಂತೋಷ್ ಕುಮಾರ್ ಕೊಟ್ಟಿಂಜ ನಮ್ಮೊಂದಿಗಿಲ್ಲ. ಆದರೆ ಅವರು ಹಂಚಿಕೊಂಡ ಕನಸು ನಮ್ಮೊಂದಿಗಿದೆ. ಅದನ್ನು ನನಸುಮಾಡುವ ಜವಾಬ್ದಾರಿ ನಮ್ಮ ಮೇಲೆ  ಇದೆ. ಗೆಜ್ಜೆಗಿರಿ ಭಕ್ತರು ಹಾಗೂ ಸರ್ವ ಸಮಾಜ ಎಂದಿಗೂ ಸಂತೋಷ್ ಕುಮಾರ್ಕೊಟ್ಟಿಂಜ ಅವರನ್ನು ನೆನಪಿಸುತ್ತದೆ. ಅವರ ಕನಸನ್ನು ನನಸು ಮಾಡಿದಾಗಲೇ ಅದು ಅವರಿಗೆ ಸಲ್ಲುವ ಬಹುದೊಡ್ಡ ಗೌರವ.

ಮತ್ತೊಮ್ಮೆಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿಂಜ.


Related Posts

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »