TOP STORIES:

ಶ್ರೀ ಕ್ಷೇತ್ರ ಪೊಳಲಿಯ`ಮೃಣ್ಮಯ ಮೂರ್ತಿ’ ವೀಡಿಯೋ ಚಿತ್ರಣ ಬಿಡುಗಡೆ


ಪೊಳಲಿ : ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ನಡೆಯುವ ಒಂದು ತಿಂಗಳ ಜಾತ್ರೆ, ಜಾತ್ರೆಯ ಸೊಬಗು, ಔಚಿತ್ಯ, ಐತಿಹ್ಯ, ಸ್ಥಳನಾಮ ವಿಶೇಷತೆ, ನಂಬಿಕೆ, ಶ್ರೀ ದೇವಿಯ ಕಾರ್ಣಿಕದ ಜೊತೆಗೆ ಶ್ರೀ ಕ್ಷೇತ್ರದ ಸಂಪೂರ್ಣ ಚಿತ್ರಣ ಹಾಗೂ ಇತರ ಕೆಲವು ಮಹತ್ವದ ವಿಷಯಗಳನ್ನೊಳಗೊಂಡ ವಿಶಿಷ್ಟ ವೀಡಿಯೋ ಸಂಕಲನ `ಮೃಣ್ಮಯ ಮೂರ್ತಿ’ ಎ. ೧೦ ರಂದು ಶನಿವಾರ ಪೊಳಲಿ ದೇವರ ಸನ್ನಿಧಾನದಲ್ಲಿ ವಿದ್ಯುಕ್ತವಾಗಿ ಬಿಡುಗಡೆಗೊಂಡಿತು.

ಮೊದಲಿಗೆ ವೀಡಿಯೋ ಕ್ಲಿಪ್ಲಿಂಗ್‌ನ್ನು (ಪೋಸ್ಟರ್) ಶ್ರೀ ರಾಜರಾಜೇಶ್ವರಿ ಅಮ್ಮನವರ ಪದತಲದಲ್ಲಿಟ್ಟು ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ. ಮಾಧವ ಭಟ್ , ನಾರಾಯಣ ಭಟ್,ಕೆ.ರಾಮ್ ಭಟ್, ಮಾಧವ ಮಯ್ಯ,ನಡುಮನೆ. ಕಂಠೀರಾಯ ರಾಮಕೃಷ್ಣ ಭಟ್ ಅರ್ಚಕ, ಪರಮೇಶ್ವರ ಭಟ್ ಅವರ ಸಮಾಕ್ಷಮದಲ್ಲಿ ಚಂದ್ರಶೇಖರ ಭಟ್ ಮೃಣ್ಮಯ ಮೂರ್ತಿಯ ಯಶಸ್ವಿಗೆ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಮೊಕ್ತೇಸರ ರಾದ ಯು .ತಾರನಾಥ ಆಳ್ವ ,ಚೇರ ಸೂರ್ಯನಾರಾಯಣ ರಾವ್ ಹಾಗೂ ರಮೇಶ್ ರಾವ್ ಚೇರಾ, ಸುಭಾಷ್ ಆಳ್ವ ಉಳಿಪಾಡಿಗುತ್ತು, ಅರುಣ್ ಆಳ್ವ ಉಳಿಪಾಡಿಗುತ್ತು, ಕೃಷ್ಣ ಕುಮಾರ್ ಪೂಂಜ, ಚಂದ್ರಹಾಸ ಶೆಟ್ಟಿ ಪೆರ್ಮಂಕಿ, ಜೀವರಾಜ ಶೆಟ್ಟಿ ಅಮ್ಮುಂಜೆಗುತ್ತು, ಉದಯ ಆಳ್ವ, ವಿಷ್ಣುಮೂರ್ತಿ ನಟ್ಟೋಜ, ಸೋಮಶೇಖರ್ ಶೆಟ್ಟಿ, ಅ.ನ.ಭ ಪೊಳಲಿ, ರೂಪಾ ಡಿ ಶೆಟ್ಟಿ, ದುರ್ಗಾಪ್ರಸಾದ ಶೆಟ್ಟಿ, ಸಂತೋಷ್ ಕುಮಾರ್ ಆಯೆರೆಮಾರ್ .ದೇವಳದ ಕಾರ್ಯನಿರ್ವಣಾಧಿಕಾರಿ ಜಯಮ್ಮ, ವೀಡಿಯೋ ನಿರ್ಮಾಪಕ ವಾಮನ್ ಪೂಜಾರಿ ಸೂರ್ಲ, ವೀಡಿಯೋ ಸಂಕಲನ ಮಾಡಿರುವ ಹರ್ಷ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಪೊಳಲಿ ಅಮ್ಮನವರ ಆಶೀರ್ವಾದದೊಂದಿಗೆ `ಸುದ್ದಿ೯’ ಸುದ್ದಿ ಪ್ರಸಾರ ಸಂಸ್ಥೆಯ ಮಾಲಕ ವಾಮನ ಪೂಜಾರಿ ಸೂರ್ಲ ನಿರ್ಮಾಣದ ಈ ವೀಡಿಯೋ ಚಿತ್ರಣದಲ್ಲಿ ಹಲವರು ಕೈಜೋಡಿಸಿದ್ದಾರೆ. ಅ.ನ.ಭ ಪೊಳಲಿ ಚಿತ್ರಕತೆಗೆ ರೂಪಾ ಡಿ ಶೆಟ್ಟಿ ನಿರೂಪಣೆ ಇದೆ. ಟ್ಯಾಬ್ ಸ್ಟೂಡಿಯೋ ಬೆದ್ರ ಧ್ವನಿ ಮುದ್ರಣ ಮಾಡಿದ್ದರೆ, ವಿನಾಯಕ ಶೆಣೈ ಛಾಯಾಗ್ರಾಹಕರಾಗಿ ದುಡಿದಿದ್ದಾರೆ. ಹರ್ಷ ಕುಮಾರ್ ಕಳಸಗುರಿ ಸಂಕಲನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಪೊಳಲಿ ಶ್ರೀ ಕ್ಷೇತ್ರದ ಕಾಲಾವಧಿ ಜಾತ್ರೆ ಹಾಗೂ ಜಾತ್ರೆಯ ಮರುದಿನ ಶ್ರೀ ಕ್ಷೇತ್ರದಲ್ಲಿ ನಡೆಯುವ ದೈವಾರಾಧನೆಯ ಸೊಬಗನ್ನು ಈ ವೀಡಿಯೋ ಚಿತ್ರಣದ ಮೂಲಕ ಹತ್ತಿರದಿಂದ ಕಂಡು ಧನ್ಯರಾಗಲು ಅವಕಾಶವಿದೆ. ಅತ್ಯಂತ ಸುಂದರ ಹಾಗೂ ಅಷ್ಟೇ ನೈಜವಾಗಿ ಮೂಡಿ ಬಂದಿರುವ ವೀಡಿಯೋ ಆಸ್ತಿಕ ಬಂಧುಗಳ ದೇವ-ದೈವಾರಾಧನೆಯ ಆಸಕ್ತಿ ಇನ್ನಷ್ಟು ಹೆಚ್ಚಿಸುವಂತಿದೆ. ಇದರಲ್ಲಿ ಅನೇಕರ ಶ್ರಮವಿದೆ ಎಂದು ಹೇಳುವ ಪತ್ರಕರ್ತ ವಾಮನ ಪೂಜಾರಿ ಸೂರ್ಲ, ಈ ವೀಡಿಯೋ ನಿರ್ಮಾಣದ ಪೊಳಲಿ ಅಮ್ಮನವರ ಭಕ್ತರಿಗೆ ಇನ್ನಷ್ಟು ಹತ್ತಿರವಾಗಿದ್ದಾರೆ ಎಂದು ಹೇಳಲು ಅಭ್ಯಂತರವಿಲ್ಲ ಎಂದು ವೀಡಿಯೋ ವೀಕ್ಷಿಸಿದ ಭಕ್ತರು ಆಡಿಕೊಂಡಿದ್ದಾರೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »