TOP STORIES:

ಶ್ರೀ ರಾಮ ಕ್ಷೇತ್ರ – ಕನ್ಯಾಡಿ, ಉಜಿರೆಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಭೇಟಿ


ಉಜಿರೆ: “ದಕ್ಷಿಣ ಭಾರತದ ಅಯೋಧ್ಯೆ” ಈ ಪ್ರಸಿದ್ಧಿಯಿರುವ ಪರಮಪೂಜ್ಯ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಸಂಸ್ಥಾಪಿಸಲ್ಪಟ್ಟ ಶ್ರೀ ರಾಮ ಕ್ಷೇತ್ರ ,ಕನ್ಯಾಡಿ,ಉಜಿರೆ ಯಲ್ಲಿರುವ ಸನ್ನಿಧಾನಕ್ಕೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಯ ಸಕ್ರೀಯ ಅಧ್ಯಕ್ಷರೂ ಸಮಾಜಮುಖಿ ಯುವನೇತಾರರಾದ ಸನ್ಮಾನ್ಯ ಪ್ರವೀಣ್ ಪೂಜಾರಿಯವರ ಮುಂದಾಳತ್ವದಲ್ಲಿ, ಸದಸ್ಯಮಿತ್ರರು ಭೇಟಿ.ಚಾತುರ್ಮಾಸ ವೃತಾಚರಿಸುತ್ತಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಾಯಿತು. ಇದೇ ಸಂದರ್ಭ ಸಂಸ್ಥೆಯ ಕಾರ್ಯಚಟುವಟಿಕೆಗಳ ವಿಸ್ತ್ರತ ಮಾಹಿತಿ ಪಡೆದು ಶುಭಾಶಂಸಿದ ಸ್ವಾಮೀಜಿಯವರು, ಸಮಾಜದ ಆಶಯಗಳು ಈಡೇರಬೇಕಾದರೆ ಸಂಘಟನೆ ಬಲಗೊಳ್ಳಬೇಕು. ಈ ನಿಟ್ಟಿನಲ್ಲಿ ವಿಶ್ವಾಸನೀಯ ಮತ್ತು ದಕ್ಷ ನಾಯಕತ್ವದ ಅಗತ್ಯತೆ ಬಹಳಷ್ಟಿದೆ. ನೀವೆಲ್ಲ ಯುವಕರು ಜವಾಬ್ದಾರಿಯುತವಾಗಿ ಮುನ್ನೆಡೆದು ಆದರ್ಶಯುತರಾಗುವಲ್ಲಿ ಭಗವಾನ್ ಶ್ರೀ ರಾಮಚಂದ್ರ ಮತ್ತು ವಿಶ್ವವಂದ್ಯ ನಾರಾಯಣ ಗುರುಗಳ ದಯೆಯನ್ನು ಪ್ರಾರ್ಥಿಸಿ ಅನುಗ್ರಹಿಸಿದರು.ಪಾರಮಾರ್ಥಿಕ ಬದುಕನ್ನು ಒಪ್ಪಿಕೊಂಡ ಸ್ವಾಮೀಜಿಗೆ ಸಮಸ್ತ ಲೋಕ ಕಲ್ಯಾಣದ ದಿವ್ಯ ಆಶಯವಿದೆ.ಸರ್ವಸಮನ್ವಯ ಸಮೃದ್ಧಿಯ ಗುಣನಡೆಯಿದೆ.ಇದಕ್ಕನುವಾಗಿ ಕನ್ಯಾಡಿ ಶ್ರೀ ರಾಮ ಕ್ಷೇತ್ರದಿಂದ ಎಲ್ಲರ ಒಳಿತು ಸಾಕಾರವಾಗಲಿ. ಅಂತೆಯೆ ನಮ್ಮ ಸಮಾಜದ ಶಕ್ತಿ ಕೇಂದ್ರವಾದ ಈ ಸಾನಿಧ್ಯಕ್ಕೆ ಬಿಲ್ಲವ ಬಂಧುಗಳೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಿ ಶ್ರದ್ಧೆಯ ಮಹತ್ವ ನೀಡಬೇಕೆಂಬುದು ಬಿಲ್ಲವ ಯುವ ವೇದಿಕೆಯ ಸದಾಶಯವಾಗಿದೆ.

Email us: billavaswarriors@gmail.com


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »