TOP STORIES:

ಸಣ್ಣ ಮಗುವಿಗೆ ತಾಯ ಹಾಲಿಗಿಂತಲೂ ‘ಇಪ್ಪೆ’ ಹಣ್ಣಿನ ರಸವೇ ಶ್ರೇಷ್ಠ!


ತಾಯ ಹಾಲಿಗಿಂತಲೂ ‘ಇಪ್ಪೆ’ ಹಣ್ಣಿನ ರಸವೇ ಶ್ರೇಷ್ಠ!

ನೀವಿದನ್ನು ನಂಬಲೇಬೇಕು! HONEY TREE ಎಂದು ಇಂಗ್ಲೀಷ್ ನಲ್ಲಿ ಕರೆಯಲ್ಪಡುವ ಮಾದಕ ಅಂಶಗಳುಳ್ಳ, ಆದಿವಾಸಿಗಳು ಪೂಜಿಸುವ ಒಂದು ಪವಿತ್ರ ಮರ. BUTTER TREE ಎಂದೂ ಕರೆಯುತ್ತಾರೆ. ಕನ್ನಡದಲ್ಲಿ ಇಪ್ಪೆ ಮರ ಎಂದು, ತಮಿಳಿನಲ್ಲಿ ಇಲ್ಲಿಪ್ಪೆ, ತೆಲುಗಿನಲ್ಲಿ ಇಪ್ಪಿ ಎಂದು, ಹಿಂದಿಯಲ್ಲಿ ಮೊಹ್ವ, ಸಂಸ್ಕ್ರತದಲ್ಲಿ ಮಧೂಕ, ಮಂಗಳೂರು ಮತ್ತು ಉಡುಪಿ ಆಸುಪಾಸಿನಲ್ಲಿ ‘ನಾನಿಲ್ ಮರ’ ಎಂದೂ ಕರೆಯುತ್ತಾರೆ. ಮೋಹ, ಮಹಲ, ಇಲುಪ, ಪೂನಮ, ಮಹುವಾ ಎಂದೂ ನಾನಾ ಭಾಷೆಗಳಲ್ಲಿ ಕರೆಯುವುದುಂಟು. ಇದರ ವೈಜ್ಙಾನಿಕ ಹೆಸರು ‘ಬ್ಯಾಸ್ಸಿಯ ಲ್ಯಾಟಿಫೂಲಿಯಾ’. ಇದು ‘ಸಪೋಟೇಸಿ’ ಕುಟುಂಬ ವರ್ಗಕ್ಕೆ ಸೇರಿದೆ.

ಇದು ಎಲೆ ಉದುರುವ ಮರದ ಜಾತಿಗೆ ಸೇರಿದೆ. ಸುಮಾರು 12 ರಿಂದ 20 ಮೀ ಎತ್ತರ ಬೆಳೆಯುವ ಇಪ್ಪೆ ಮರ, ಒಣ ಹವೆ ಮತ್ತು ತೇವ ಹವೆಯ ಕಾಡುಗಳಲ್ಲಿ ಬಿಡಿ ಬಿಡಿಯಾಗಿ ಬೆಳೆಯುತ್ತದೆ. ಕರ್ನಾಟಕದಲ್ಲಿ ಪಶ್ಚಮ ಘಟ್ಟದ ಕಾಡು ಹೊಳೆಯ ಸಮೀಪದಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ತೊಗಟೆ ತಿಳಿ ಕಪ್ಪು ಅಥವಾ ಬೂದು ಬಣ್ಣದಿಂದ ಕೂಡಿದ್ದು, ಗೆಲ್ಲುಗಳು ಚದುರಿ ಚದುರಿದಂತೆ ಇದ್ದು ನೋಡಲು ತುಂಬಾ ಆಕರ್ಷಕವಾಗಿರುತ್ತದೆ.

ಚಳಿಗಾಲ ಬಂತೆಂದರೆ ಈ ಮರ ವಿಶಿಷ್ಟವಾದ ಕಟು ಮಧುರ ಹೂವಿನ ಪರಿಮಳವನ್ನು ಸೂಸುತ್ತದೆ. ನೇರವಾದ ಕಾಂಡದ ಮೇಲೆ ಕೊಂಬೆಗಳು ಮತ್ತು ತುದಿ ಚೂಪಾಗಿರುವ ಎಲೆಗಳು – ಛತ್ರಿಗಳು ಬಿಡಿಸಿಟ್ಟಂತೆ ಹರಡಿಕೊಂಡಿರುತ್ತದೆ. ವರ್ಷಕ್ಕೊಮ್ಮೆ ಎಲೆ ಉದಿರುವ ಈ ಮರ, ಹೊಸ ಚಿಗುರು ಬಂದಾಗ ತಾಮ್ರಗೆಂಪು ಬಣ್ಣದಿಂದ ನಳನಳಿಸುತ್ತದೆ.  ಈ ಸಮಯದಲ್ಲಿ ಬಸ್ತಾರ್ ನ ಆದಿವಾಸಿಗಳು ಮತ್ತು ಮಧ್ಯಪ್ರದೇಶದ ಗೊಂಡ ಆದಿಮಾಸಿಗಳು ಆ ಮರವನ್ನು ಪೂಜಿಸುತ್ತಾರೆ.

ಹೊಸ ಚಿಗುರು ಮಾಗಿ ಎಲೆ ದಪ್ಪಗಾದ ಕೂಡಲೇ ಮರ ಹೂ ಬಿಡಲು ಆರಂಭಿಸುತ್ತದೆ. ಈ ಹೂಗಳು ಮಾಸಲು ಬಣ್ಣವನ್ನು ಹೊಂದಿದ್ದು, ಕೊಂಬೆಯ ತುದಿಯಲ್ಲಿ ಜೋತು ಬಿದ್ದಿರುತ್ತದೆ. ಈ ಹೂವಿನ ಪುಷ್ಪಪಾತ್ರೆಯ ಭಾಗ ಹಣ್ಣಾಗಿ ತಿನ್ನಲು ರುಚಿಯಾಗಿರುತ್ತದೆ. ಹಕ್ಕಿಗಳು ಮತ್ತು ಕಾಡು ಪ್ರಾಣಿಗಳಿಗೂ ಈ ಹಣ್ಣು ಬಹಳ ಪ್ರಿಯ. ಇಪ್ಪೆ ಹಣ್ಣಿನಿಂದ ಆದಿವಾಸಿಗಳು ಹೆಂಡವನ್ನು ತಯಾರಿಸುತ್ತಾರೆ. ಇದರ ಬೀಜದಿಂದ ಎಣ್ಣೆ ತೆಗೆದು ಅಡುಗೆಗೆ ಉಪಯೋಗಿಸುತ್ತಾರೆ.  ಕಾಡಿನಲ್ಲಿ ಆಹಾರಕ್ಷಾಮ ಉಂಟಾದಾಗ ಆದಿವಾಸಿಗಳಿಗೆ ಈ ಮರದ ಹೂವು ಹಣ್ಣುಗಳೇ ಆಹಾರ. ಗೊಂಡ ಆದಿವಾಸಿಗಳಲ್ಲಿ ಚಳಿಗಾಲದಲ್ಲಿ ಮಗು ಜನಿಸಿದರೆ, ತಾಯ ಹಾಲಿಗೂ ಮೊದಲು ಇಪ್ಪೆ ಹಣ್ಣಿನ ರಸವನ್ನು ನೆಕ್ಕಿಸುತ್ತಾರೆ. ಯಾಕೆಂದರೆ ಅದು ಆದಿವಾಸಿಗಳ ಪಾಲಿನ ಪವಿತ್ರ ಮತ್ತು ಆರಾಧನೀಯ ಮರ.

(ಸಂಗ್ರಹ)

PC: Dinesh bangera irvattur


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »