TOP STORIES:

FOLLOW US

ಸಣ್ಣ ಮಗುವಿಗೆ ತಾಯ ಹಾಲಿಗಿಂತಲೂ ‘ಇಪ್ಪೆ’ ಹಣ್ಣಿನ ರಸವೇ ಶ್ರೇಷ್ಠ!


ತಾಯ ಹಾಲಿಗಿಂತಲೂ ‘ಇಪ್ಪೆ’ ಹಣ್ಣಿನ ರಸವೇ ಶ್ರೇಷ್ಠ!

ನೀವಿದನ್ನು ನಂಬಲೇಬೇಕು! HONEY TREE ಎಂದು ಇಂಗ್ಲೀಷ್ ನಲ್ಲಿ ಕರೆಯಲ್ಪಡುವ ಮಾದಕ ಅಂಶಗಳುಳ್ಳ, ಆದಿವಾಸಿಗಳು ಪೂಜಿಸುವ ಒಂದು ಪವಿತ್ರ ಮರ. BUTTER TREE ಎಂದೂ ಕರೆಯುತ್ತಾರೆ. ಕನ್ನಡದಲ್ಲಿ ಇಪ್ಪೆ ಮರ ಎಂದು, ತಮಿಳಿನಲ್ಲಿ ಇಲ್ಲಿಪ್ಪೆ, ತೆಲುಗಿನಲ್ಲಿ ಇಪ್ಪಿ ಎಂದು, ಹಿಂದಿಯಲ್ಲಿ ಮೊಹ್ವ, ಸಂಸ್ಕ್ರತದಲ್ಲಿ ಮಧೂಕ, ಮಂಗಳೂರು ಮತ್ತು ಉಡುಪಿ ಆಸುಪಾಸಿನಲ್ಲಿ ‘ನಾನಿಲ್ ಮರ’ ಎಂದೂ ಕರೆಯುತ್ತಾರೆ. ಮೋಹ, ಮಹಲ, ಇಲುಪ, ಪೂನಮ, ಮಹುವಾ ಎಂದೂ ನಾನಾ ಭಾಷೆಗಳಲ್ಲಿ ಕರೆಯುವುದುಂಟು. ಇದರ ವೈಜ್ಙಾನಿಕ ಹೆಸರು ‘ಬ್ಯಾಸ್ಸಿಯ ಲ್ಯಾಟಿಫೂಲಿಯಾ’. ಇದು ‘ಸಪೋಟೇಸಿ’ ಕುಟುಂಬ ವರ್ಗಕ್ಕೆ ಸೇರಿದೆ.

ಇದು ಎಲೆ ಉದುರುವ ಮರದ ಜಾತಿಗೆ ಸೇರಿದೆ. ಸುಮಾರು 12 ರಿಂದ 20 ಮೀ ಎತ್ತರ ಬೆಳೆಯುವ ಇಪ್ಪೆ ಮರ, ಒಣ ಹವೆ ಮತ್ತು ತೇವ ಹವೆಯ ಕಾಡುಗಳಲ್ಲಿ ಬಿಡಿ ಬಿಡಿಯಾಗಿ ಬೆಳೆಯುತ್ತದೆ. ಕರ್ನಾಟಕದಲ್ಲಿ ಪಶ್ಚಮ ಘಟ್ಟದ ಕಾಡು ಹೊಳೆಯ ಸಮೀಪದಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ತೊಗಟೆ ತಿಳಿ ಕಪ್ಪು ಅಥವಾ ಬೂದು ಬಣ್ಣದಿಂದ ಕೂಡಿದ್ದು, ಗೆಲ್ಲುಗಳು ಚದುರಿ ಚದುರಿದಂತೆ ಇದ್ದು ನೋಡಲು ತುಂಬಾ ಆಕರ್ಷಕವಾಗಿರುತ್ತದೆ.

ಚಳಿಗಾಲ ಬಂತೆಂದರೆ ಈ ಮರ ವಿಶಿಷ್ಟವಾದ ಕಟು ಮಧುರ ಹೂವಿನ ಪರಿಮಳವನ್ನು ಸೂಸುತ್ತದೆ. ನೇರವಾದ ಕಾಂಡದ ಮೇಲೆ ಕೊಂಬೆಗಳು ಮತ್ತು ತುದಿ ಚೂಪಾಗಿರುವ ಎಲೆಗಳು – ಛತ್ರಿಗಳು ಬಿಡಿಸಿಟ್ಟಂತೆ ಹರಡಿಕೊಂಡಿರುತ್ತದೆ. ವರ್ಷಕ್ಕೊಮ್ಮೆ ಎಲೆ ಉದಿರುವ ಈ ಮರ, ಹೊಸ ಚಿಗುರು ಬಂದಾಗ ತಾಮ್ರಗೆಂಪು ಬಣ್ಣದಿಂದ ನಳನಳಿಸುತ್ತದೆ.  ಈ ಸಮಯದಲ್ಲಿ ಬಸ್ತಾರ್ ನ ಆದಿವಾಸಿಗಳು ಮತ್ತು ಮಧ್ಯಪ್ರದೇಶದ ಗೊಂಡ ಆದಿಮಾಸಿಗಳು ಆ ಮರವನ್ನು ಪೂಜಿಸುತ್ತಾರೆ.

ಹೊಸ ಚಿಗುರು ಮಾಗಿ ಎಲೆ ದಪ್ಪಗಾದ ಕೂಡಲೇ ಮರ ಹೂ ಬಿಡಲು ಆರಂಭಿಸುತ್ತದೆ. ಈ ಹೂಗಳು ಮಾಸಲು ಬಣ್ಣವನ್ನು ಹೊಂದಿದ್ದು, ಕೊಂಬೆಯ ತುದಿಯಲ್ಲಿ ಜೋತು ಬಿದ್ದಿರುತ್ತದೆ. ಈ ಹೂವಿನ ಪುಷ್ಪಪಾತ್ರೆಯ ಭಾಗ ಹಣ್ಣಾಗಿ ತಿನ್ನಲು ರುಚಿಯಾಗಿರುತ್ತದೆ. ಹಕ್ಕಿಗಳು ಮತ್ತು ಕಾಡು ಪ್ರಾಣಿಗಳಿಗೂ ಈ ಹಣ್ಣು ಬಹಳ ಪ್ರಿಯ. ಇಪ್ಪೆ ಹಣ್ಣಿನಿಂದ ಆದಿವಾಸಿಗಳು ಹೆಂಡವನ್ನು ತಯಾರಿಸುತ್ತಾರೆ. ಇದರ ಬೀಜದಿಂದ ಎಣ್ಣೆ ತೆಗೆದು ಅಡುಗೆಗೆ ಉಪಯೋಗಿಸುತ್ತಾರೆ.  ಕಾಡಿನಲ್ಲಿ ಆಹಾರಕ್ಷಾಮ ಉಂಟಾದಾಗ ಆದಿವಾಸಿಗಳಿಗೆ ಈ ಮರದ ಹೂವು ಹಣ್ಣುಗಳೇ ಆಹಾರ. ಗೊಂಡ ಆದಿವಾಸಿಗಳಲ್ಲಿ ಚಳಿಗಾಲದಲ್ಲಿ ಮಗು ಜನಿಸಿದರೆ, ತಾಯ ಹಾಲಿಗೂ ಮೊದಲು ಇಪ್ಪೆ ಹಣ್ಣಿನ ರಸವನ್ನು ನೆಕ್ಕಿಸುತ್ತಾರೆ. ಯಾಕೆಂದರೆ ಅದು ಆದಿವಾಸಿಗಳ ಪಾಲಿನ ಪವಿತ್ರ ಮತ್ತು ಆರಾಧನೀಯ ಮರ.

(ಸಂಗ್ರಹ)

PC: Dinesh bangera irvattur


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »