TOP STORIES:

ಸಮಾಜಸೇವಕ ಬಾರ್ಕೂರು ಶಂಕರ ಶಾಂತಿಯ ಮೇಲಾದ ಮಾರಣಾಂತಿಕ ಹಲ್ಲೆ ಖಂಡನೀಯ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ


ಸಮಾಜಸೇವಕ,ಬಿಲ್ಲವ ಸಮಾಜದ ಬಂಧು ಬಾರ್ಕೂರು ಶಂಕರ ಶಾಂತಿಯ ಮೇಲಾದ ಮಾರಣಾಂತಿಕ ಹಲ್ಲೆ ಖಂಡನೀಯ.ಈ ದುಷ್ಕೃತ್ಯವೆಸಗಿದ ಎಲ್ಲಾ ಆರೋಪಿಗಳಿಗೂ ಶಿಕ್ಷೆಯಾಗಲಿ.

ತನ್ನ ಊರಿನಲ್ಲಿ ಜನಸಾಮಾನ್ಯರಿಗಾಗುತ್ತಿದ್ದ ಅನ್ಯಾಯದ ವಿರುದ್ಧ ಹೋರಾಟಗಳನ್ನು ರೂಪಿಸುತ್ತಾ ಕಾನೂನು,ನಿಯಮಪಾಲನೆ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ಶಂಕರ ಶಾಂತಿಯವರಿಗೆ ದಿನಾಂಕ; 21-02-2021,ಆದಿತ್ಯವಾರದಂದು ಮನೆಯ ಸಮೀಪ ಒಂದು‌ ಸಭಾಭವನದ ಅಡುಗೆ ಕೋಣೆಯಲ್ಲಿ ಕೂಡಿ ಹಾಕಿ,ಚಿತ್ರ ಹಿಂಸೆ ನೀಡಿ ಹಲ್ಲೆ ನಡೆಸಲಾಗಿದೆ.

ಅದೇ ಸಮಯ ಬೊಬ್ಬೆ ಕೇಳಿ ಸ್ಥಳಕ್ಕಾಗಮಿಸಿದ ಶಂಕರ ಶಾಂತಿಯವರ ಹೆಂಡತಿಯು ರಕ್ತದ ಮಡುವಿನಲ್ಲಿದ್ದ ತನ್ನ ಗಂಡನನ್ನು ಅಜ್ಜರಕಾಡು ಆಸ್ಪತ್ರೆಗೆ ಸೇರಿಸಿದ್ದಾರೆ.RTI ಕಾರ್ಯಕರ್ತನಾಗಿ ಸಾಮಾಜಿಕ ನೆಲೆಯಲ್ಲಿ ತನ್ನ ಊರಿನಲ್ಲಿ ಹಾಗೂ ಸುತ್ತಮುತ್ತ ಕೆಲವೊಂದು ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದವರು ಶಂಕರ ಶಾಂತಿ.ರಸ್ತೆ ಸಾರಿಗೆ ಸುರಕ್ಷತೆ ವಿಷಯ,ಕಾಂಕ್ರೀಟ್ ರಸ್ತೆ ಕಳಪೆ ವಿಷಯ,ಬಾರ್ಕೂರು ಜೈನ ಬಸದಿ ಆಕ್ರಮಣ ತೆರವು,ಹೊಸಾಳ ಗರಡಿಯಲ್ಲಿ ವೈದಿಕನೋರ್ವನ ಅನಾಚಾರ ಪ್ರಶ್ನಿಸುವಿಕೆ,

ಇಂತಹದ್ದೆ ಅನೇಕ ಜನಪರ ಸೇವೆಗಳಲ್ಲಿ ಮುಂಚೂಣಿಯ ಪ್ರಯತ್ನ ನಿಸ್ವಾರ್ಥದಿಂದ ಶ್ರೀಯುತರಿಂದ ನಡೆಯುತ್ತಿತ್ತು.ರಸ್ತೆ ಬದಿ ಬ್ಯಾನರ್ ಅಳವಡಿಸಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದರ ಕುರಿತು ಕ್ರಮಕೈಗೊಂಡಿದ್ದರಿಂದ ದುಷ್ಕರ್ಮಿಗಳಾದ ಪ್ರವೀಣ ಆಚಾರ್ಯ,ಪ್ರಸಾದ್ ಆಚಾರ್ಯ,ಶಾಂತರಾಮ ಶೆಟ್ಟಿ,ಮಂಜಪ್ಪ ಪೂಜಾರಿ,ದಿವಾಕರ ಒಟ್ಟು ಸೇರಿ ಕಬ್ಬಿಣದ ರಾಡ್‌ನಿಂದ ಕೊಲೆಯತ್ನ ನಡೆಸಿರುವುದು ಅತ್ಯಂತ ಕೀಳುಮಟ್ಟದ ಮನುಷ್ಯತ್ವವಿಲ್ಲದ ವರ್ತನೆಯಾಗಿದೆ.ಇದರಲ್ಲಿ ನಮ್ಮ ಸಮಾಜದ ಮಂಜಪ್ಪ ಪೂಜಾರಿ ಸೇರಿದ್ದು ,ಸ್ವಾರ್ಥ ಸಾಧನೆಯಿಂದ ತಪ್ಪು ಯಾರೇ ಮಾಡಿರಲಿ ಅದಕ್ಕೆ ಶಿಕ್ಷೆಯಾಗಲಿ ಎನ್ನುವುದೇ ನಮ್ಮ ಇರಾದೆ. ತಪ್ಪುಗಳನ್ನು, ಸಾರ್ವಜನಿಕ ಅನ್ಯಾಯಗಳನ್ನು ಪ್ರಶ್ನಿಸಿದಾಕ್ಷಣ ಕೊಲೆ ಮಾಡುವ ಮಟ್ಟಕ್ಕೆ ತಲುಪಿರುವುದು ಈ ಪ್ರಜಾಪ್ರಭುತ್ವ ವ್ಯವಸ್ಥೆಯ ದುರಂತವೆ ಸರಿ.

ಇದೀಗ ಅಗರ್ಭ ಶ್ರೀಮಂತಿಕೆಯ ಮತ್ತು ರಾಜಕೀಯ ಪ್ರಭಾವ ಬಳಸಿ ತಪ್ಪಿತಸ್ಥರು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.ಇವರನ್ನು ಬಂಧಿಸಿ ಸೂಕ್ತ ಶಿಕ್ಷೆ ವಿಧಿಸುವಂತೆ ಅಗ್ರಹಿಸುತ್ತೇವೆ.ಇಂತಹ ಸಮಾಜ ದ್ರೋಹಿ ಕೆಲಸಮಾಡುವವರನ್ನು ಸುಮ್ಮನೆ ಬಿಟ್ಟರೆ ಮುಂದೆ ಇನ್ನಷ್ಟು ಲೋಕಕಂಠಕರಾಗಿ ಅದೆಷ್ಟೋ ಪಾಪದವರ ಮನೆ ಹಾಳುಮಾಡಲು ಹಿಂಜರಿಯುವುದಿಲ್ಲ‌.

ಪೋಲಿಸ್ ಇಲಾಖೆ ಮತ್ತು ಜನಪ್ರತಿನಿಧಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ಶಂಕರ ಶಾಂತಿಗೆ ನ್ಯಾಯ ಒದಗಿಸಬೇಕು ಮತ್ತು ಎಲ್ಲಾ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಸಹಕರಿಸಬೇಕೆಂದು ಕೇಳಿಕೊಳ್ಳುತ್ತೇವೆ.

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಹಾಗೂ ಸರ್ವ ಸದಸ್ಯರು
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ)


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »