TOP STORIES:

ಸೆ.24 ರಂದು ಮಂಗಳೂರಿನ’ಕುಂಜತ್ತಬೈಲಿನಲ್ಲಿ ಬಿಲ್ಲವ ಹಾಸ್ಟೆಲ್’ ಉದ್ಘಾಟನೆ


ಮಂಗಳೂರು: “ಬ್ರಹ್ಮಶ್ರೀ ನಾರಾಯಣಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ,

ಸಂಘಟನೆಯಿಂದ ಬಲಯುತರಾಗಿರಿ ಎಂಬ ಧೈಯೋದ್ದೇಶದೊಂದಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್‌ ನಿಂದ

ಕುಂಜತ್ತಬೈಲಿನಲ್ಲಿ ದಿ.ದಾಮೋದರ ಆರ್. ಸುವರ್ಣ ಸ್ಮಾರಕಬಿಲ್ಲವ ಹಾಸ್ಟೆಲ್ ನಿರ್ಮಿಸಲಾಗಿದ್ದು ಸೆ.24 ರಂದುಲೋಕಾರ್ಪಣೆಗೊಳ್ಳಲಿದೆಎಂದು ಅಖಿಲ ಭಾರತ ಬಿಲ್ಲವರ ಯುನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಗರದ ಪುರಭವನದಲ್ಲಿ ಲೋಕಾರ್ಪಣಾ ಸಮಾರಂಭ

ನಡೆಯಲಿದ್ದು ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ದೀಪ ಪ್ರಜ್ವಲನೆಯನ್ನು ಮಾಜಿಕೇಂದ್ರ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿಯವರು ನಡೆಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರಡಿ. ಸುವರ್ಣ ವಹಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಬಿಡುಗಡೆಗೊಳಿಸಲಿದ್ದಾರೆ.

ಮುಖ್ಯ ಅಥಿತಿಗಳಾಗಿ ಮಾಜಿ ಸಂಸದ ಡಿ.ವಿ. ಸದಾನಂದ ಗೌಡ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಆರೋಗ್ಯ ಮತ್ತುಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವಿ. ಸುನೀಲ್ ಕುಮಾರ್, ಉಮಾನಾಥ್ ಕೋಟ್ಯಾನ್, ವೇದವ್ಯಾಸ್‌ ಕಾಮತ್‌, ಡಾ.ವೈ. ಭರತ್ ಶೆಟ್ಟಿ, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಮೇಯರ್ ಜಯಾನಂದ ಅಂಚನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಮುಖ್ಯ ಸಚೇತಕ ಕೆ. ವಸಂತ ಬಂಗೇರ, ಮಾಜಿ ಶಾಸಕ ಗೋಪಾಲ ಪೂಜಾರಿ ಉಪಸ್ಥಿತರಿರಲಿದ್ದಾರೆ. ಗೌರವ ಉಪಸ್ಥಿತಿಯಲ್ಲಿ ಉದ್ಯಮಿ ಜಯರಾಮ ಬನಾನ್, ಬನಾನ್, ಸಣ್ಣ ಕೈಗಾರಿಕಾ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಉದಯಚಂದ್ರ ಡಿ. ಸುವರ್ಣ, ಆರ್ಯ ಈಡಿಗ ಸಂಘದ ಅಧ್ಯಕ್ಷ ತಿಮ್ಮೇಗೌಡ ,ಉದ್ಯಮಿ ಜೆ.ಪಿ. ಸುಧಾಕರ್‌, ಬಿಲ್ಲವ ಚೇಂಬರ್ಆಫ್ ಕಾಮರ್ಸ್ ಅಧ್ಯಕ್ಷ ಎನ್.ಟಿ. ಪೂಜಾರಿ, ಮುಂಬಯಿ ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ಹರೀಶ್ ಜೆ. ಅಮೀನ್, ಬೆಂಗಳೂರು ಬಿಲ್ಲವಅಸೋಸಿಯೇಶನ್ ಅಧ್ಯಕ್ಷ ವೇದಕುಮಾರ್, ಅಖಿಲ ಭಾರತ ಬಿಲ್ಲವರ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ದುಬಾಯಿ ಬಿಲ್ಲವ ಬಳಗಮಹಿಳಾ ವಿಭಾಗದ ಅಧ್ಯಕ್ಷೆ ಗೀತಾ ಸುವರ್ಣ, ಕಾರ್ಪೊರೇಟರ್  ಶರತ್ ಕುಮಾರ್ ಕುಮಾರ್ ಉಪಸ್ಥಿತರಿರಲಿದ್ದಾರೆ. ಇದೇ ಸಂದರ್ಭದಲ್ಲಿ ಉದ್ಯಮಿ  ಸುಶೀರ್ ಕುಮಾರ್, ಇಂಜಿನಿಯರ್ ಬಾಬ ಅಲಂಕಾರ್ಅವರನ್ನು ಸನ್ಮಾನಿಸಲಾಗುವುದುಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಬಿಲ್ಲವರ ಯುನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ, ಅಖಿಲ ಭಾರತ ಬಿಲ್ಲವರಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ಸುಖಲಾಕ್ಷಿ ಸುವರ್ಣ, ಕೋಶಾಧಿಕಾರಿ ಕಾಶೀನಾಥ್, ಜೊತೆ ಕಾರ್ಯದರ್ಶಿಯೋಗೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. 5.25 ಕೋಟಿ ರೂ. ವೆಚ್ಚದ ಕಟ್ಟಡ!

ಮಂಗಳೂರು ನಗರದಿ೦ದ 6 ಕಿ.ಮೀ. ದೂರದ ಕುಂಜತ್ತಬೈಲ್‌ನ ಪ್ರಶಾಂತ ವಾತಾವರಣದಲ್ಲಿ ಸುಮಾರು 1 ಎಕರೆ ವ್ಯಾಪ್ತಿಯಲ್ಲಿ 5.25 ಕೋಟಿ ರೂ. ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಿಸಲಾಗಿದ್ದು ಬಿಲ್ಲವ ಹಾಗೂ ಹಿಂದುಳಿದ ಸಮುದಾಯದಲ್ಲಿ ಉನ್ನತ ವೃತ್ತಿ ಶಿಕ್ಷಣ ಬಯಸುವ ವಿದ್ಯಾರ್ಥಿಗಳ ಅನುಕೂಲತೆಗಾಗಿ ಹಾಸ್ಟೆಲ್ ನಿರ್ಮಿಸಲಾಗಿದೆ. ಸುಮಾರು 5 ಮಹಡಿಯ ಕಟ್ಟಡ ಇದಾಗಿದ್ದು ಒಟ್ಟು 19,500 ಚದರ ಅಡಿ ವಿಸ್ತೀರ್ಣ ಹೊಂದಿದೆ. ನೆಲ ಅಂತಸ್ತಿನಲ್ಲಿ ಆಡಳಿತ ಕಚೇರಿ, ಗ್ರಂಥಾಲಯ ಹಾಗೂ ವಸತಿ

ಕೊಠಡಿಗಳು, 1ನೇ ಹಾಗೂ 3ನೇ ಮಹಡಿಯಲ್ಲಿ ವಸತಿ ಕೊಠಡಿ ಮತ್ತು 2ನೇ ಮಹಡಿಯಲ್ಲಿ ಸಭಾಂಗಣ ಒಳಗೊಂಡಿದೆ. ತಳಮಹಡಿಯಲ್ಲಿ ಅಡುಗೆ ಕೋಣೆ, ಉಗ್ರಾಣ ಕೋಣೆಗಳಿವೆ. ಸುಮಾರು 100 ಮಂದಿ ವಿದ್ಯಾರ್ಥಿಗಳಿಗೆ ವ್ಯವಸ್ಥಿತವಾದ ವಸತಿ ಸೌಲಭ್ಯವಿದ್ದು ವೃತ್ತಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆಯಾಗಿದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »