TOP STORIES:

ಸೋಂಕನ್ನು ತಡೆಗಟ್ಟಲು ಸಲಹೆ ಕೊಡಬೇಕೇ? – ಪೊಲೀಸ್ ಆಯುಕ್ತರೊಂದಿಗೆ ನೇರವಾಗಿ ಹಂಚಿಕೊಳ್ಳಿ!


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ದೈನಂದಿನ ಪ್ರಕರಣ ಏರುಗತಿಯಲ್ಲೇ ಸಾಗುತ್ತಿದೆ. ಇದಕ್ಕಾಗಿ ಶುಕ್ರವಾರದಿಂದ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿಯಮಾವಳಿಯ ಜೊತೆ ವಾರಾಂತ್ಯ ಕರ್ಪ್ಯೂ ಜಾರಿ ಮಾಡಲಾಗಿದೆ. ಜಿಲ್ಲೆಯಲ್ಲಿ ಇದಕ್ಕೂ ಮುಂಚೆ ರಾಜ್ಯದ ನಿಯಮಾವಳಿಗಳು ಜಾರಿಯಲ್ಲಿತ್ತು.

ಸೋಂಕಿನ ಹೆಚ್ಚಳದಿಂದ ಈಗಾಗಲೇ ಕರಾವಳಿಯ ಆಸ್ಪತ್ರೆಗಳಲ್ಲಿ ಈಗಾಗಲೇ ಬೆಡ್ ನಿರ್ವಹಣೆ ಸವಾಲಾಗಿ ಪರಿಣಮಿಸಿದೆ. ಆಕ್ಸಿಜನ್ ಕೊರತೆಯ ಮದ್ಯೆ ಐಸಿಯು – ವೆಂಟಿಲೇಟರ್ ಹೊಂದಿಸುವ ಪ್ರಯತ್ನ ಸಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಹೇಗಾದರೂ ಮಾಡಿ ಕೊವೀಡ್ ಪ್ರಸರಣಕ್ಕೆ ಕಡಿವಾಣ ಹಾಕಲೇಬೇಕೆಂಬ ಪ್ರಯತ್ನದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸಾರ್ವಜನಿಕರ ಸಲಹೆಗಳಿಗಾಗಿ ಆಹ್ವಾನ ನೀಡಿದ್ದಾರೆ.

 

ಈ ಬಗ್ಗೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಮ್ಮ ಅಧಿಕೃತ ಟ್ವಿಟರ್ ಮೂಲಕ ಟ್ವೀಟ್ ಮಾಡಿ ” ಪ್ರೀತಿಯ ಮಂಗಳೂರಿಗರೇ ಕೋವಿಡ್ -19 ಗೆ ಸರ್ಕಾರ ಈಗಾಗಲೇ ಹೊರಡಿಸಿರುವ ಗೈಡ್ ಲೈನ್ಸ್ ಗಳನ್ನು ಪಾಲಿಸಲು ಮತ್ತು ಇದನ್ನು ಮತ್ತಷ್ಟು ಉತ್ತಮವಾಗಿ ಜಾರಿಗೊಳಿಸಿ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಿ” ಎಂದು ಹೇಳಿದ್ದಾರೆ.

ಮೇ 9ರ ಭಾನುವಾರ, ಬೆಳಗ್ಗೆ 11ರಿಂದ 12 ಗಂಟೆಯವರೆಗೆ ಮಂಗಳೂರು ಕಮಿಷನರ್ ತಮ್ಮ ಅಧಿಕೃತ ಟ್ವಿಟರ್ ಖಾತೆ ಹಾಗು ಫೇಸ್ ಬುಕ್ ಖಾತೆಯಲ್ಲಿ ಲೈವ್ ಬರಲಿದ್ದು ಈ ವೇಳೆ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬಹುದಾಗಿದೆ.

ಒಟ್ಟಾರೆ ಜಿಲ್ಲೆಯಲ್ಲಿ ಕೊರೊನಾ ಸಾಂಕ್ರಮಿಕದ ಪ್ರಸರಣದ ಕೊಂಡಿ ಮುರಿಯಲು ಸಾರ್ವಜನಿಕರು ಹಾಗೂ ಜಿಲ್ಲಾಡಳಿತ ಕೈ ಜೋಡಿಸಿ ಪ್ರಯತ್ನಿಸಬೇಕಾಗಿದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »