TOP STORIES:

ಸೋಲನ್ನು ಪಾಠವನ್ನಾಗಿ, ಗೆಲುವು, ಸಹಕಾರವನ್ನು ಮಾರ್ಗದರ್ಶನವನ್ನಾಗಿ ಸಾಧನೆಯ ಹಾದಿಯಲ್ಲಿ ಬಿಲ್ಲವ ಪ್ರತಿಭೆ ಅಂಚನ್ ಗೀತಾ


“ಅನುಭವಕ್ಕಿಂತ ಮಿಗಿಲಾದುದು ಏನು ಇಲ್ಲ ” ಎಂಬ ಮಾತಿದೆ ಅಂತೆಯೇ ತಾನು ಅನುಭವಿಸಿದ ನೋವು , ಸೋಲನ್ನು ಪಾಠವನ್ನಾಗಿ, ಗೆಲುವು, ಸಹಕಾರವನ್ನು ಮಾರ್ಗದರ್ಶನವನ್ನಾಗಿ ಇಟ್ಟುಕೊಂಡು ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ಬಿಲ್ಲವ ಪ್ರತಿಭೆ ಅಂಚನ್ ಗೀತಾ.ಇವರು ಅಣ್ಣಿ ಅಂಚನ್ ಹಾಗೂ ಶ್ರೀಮತಿ ಭವಾನಿ ಪೂಜಾರ್ತಿಯವರ ಪುತ್ರಿ. ಹುಟ್ಟಿದ್ದು ಮಾಯಾನಗರಿ ಮುಂಬಯಿಯಲ್ಲಿ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮುಂಬಯಿಯಲ್ಲಿ , ಪ್ರೌಢ ಶಿಕ್ಷಣವನ್ನು ನೀರುಡೆಯಲ್ಲಿ, ಪಿಯುಸಿ ಯನ್ನು ಕಟೀಲು ಕಾಲೇಜಿನಲ್ಲಿ ಪೂರೈಸಿ ನಂತರ ಆಳ್ವಾಸ್ ನಲ್ಲಿ ಪತ್ರಿಕೋದ್ಯಮ ಪದವಿ ಶಿಕ್ಷಣವನ್ನು ಪಡೆದಿದ್ದಾರೆ. ನಂತರ ಮೈಸೂರಿನಲ್ಲಿ ಎಂ.ಎ ಜರ್ನಲಿಸಂ , ಬೆಂಗಳೂರಿನಲ್ಲಿ ಎಂ.ಎ ಇಂಗ್ಲಿಷ್ ಲಿಟರೇಚರ್ ಮುಗಿಸಿ ಇವರು ಸತತ ಮೂರು ಪದವಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

“ಯಾವುದೇ ಯಶಸ್ವಿನ ದಾರಿಯ ಪ್ರಾರಂಭ ಮೊದಲು ಶೂನ್ಯದಿಂದಲೇ ಆರಂಭವಾಗುವುದು.” ಅಂತೆಯೇ 2010 ರಲ್ಲಿ ಏಕಾಂಗಿಯಾಗಿ ಬೆಂಗಳೂರಿನತ್ತ ಪಯಣಿಸಿದ ಗೀತಾರವರಿಗೆ ಆಗ ಬೆಂಗಳೂರು ನಗರ ಜೀವನದ ಅರಿವೇ ಇರಲಿಲ್ಲ ಆ ಸಂದರ್ಭದಲ್ಲಿ ಸಹಕರಿಸಿದ ಅವರ ಜರ್ನಲಿಸಂ ಶಿಕ್ಷಕಿ ಮೌಲ್ಯ ಜೀವನ್ ರವನ್ನು ಪ್ರತಿ ಬಾರಿ ಸ್ಮರಿಸುತ್ತಾರೆ. ಮುಂದೆ ಬೆಂಗಳೂರಿನ ಭಾರತೀಯ ವಿದ್ಯಾಭವನದಲಿ ಒಂದು ಕೋರ್ಸ್ ಶಿಕ್ಷಣ ಪಡೆಯುತ್ತಿರುವಾಗ ಬೆಳಗ್ಗೆ ಕ್ಲಾಸ್ ಪಡೆದು ಮಧ್ಯಾಹ್ನದ ನಂತರ ಏರ್ ಟೇಲ್ ಕಂಪನಿಯ ಲ್ಲಿ ಕೆಲಸ ಮಾಡುವ ಮೂಲಕ ಬೆಂಗಳೂರಿನಲ್ಲಿ ಜೀವನ ನಡೆಸಿದರು.

ಅಂಚನ್ ಗೀತಾರವರು ತಮ್ಮ ಜೀವನದ ಪ್ರತಿ ಕಷ್ಟ , ನೋವನ್ನು ಮರೆಸುತ್ತಿದ್ದದ್ದು ಅದು ನನ್ನ ತಂದೆ ತಾಯಿ ಹಾಗೂ ಸಹೋದರಿಯರ ಪ್ರೀತಿ, ಮತ್ತು ಸದಾ ಧೈರ್ಯ ತುಂಬೋ ಸ್ನೇಹಿತೆಯರು ಎಂದು ಹೇಳುತ್ತಾರೆ. ಅಲ್ಲದೆ ನನ್ನ ತಂದೆ ತಾಯಿ ಅನುಭವಿಸಿದ ನೋವು ನನಗೆ ಆತ್ಮವಿಶ್ವಾಸವನ್ನು ಕಲಿಸಿಕೊಟ್ಟಿದೆ ಎನ್ನುತ್ತಾರೆ. ಮುಂದೆ 2010 ರಿಂದ ಮಾಧ್ಯಮದಲ್ಲಿ ತಮ್ಮ ಪಯಣ ಆರಂಭಿಸಿದ ಇವರು ಸುಮಾರು 9 ವರ್ಷಗಳ ಕಾಲ ಸುವರ್ಣ ನ್ಯೂಸ್, ಕಸ್ತೂರಿ ನ್ಯೂಸ್, ಪ್ರಜಾ ಟಿವಿ ಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಇವರು ಮಾಡೆಲಿಂಗ್ ಕ್ಷೇತ್ರದಲ್ಲೂ ಮಿಂಚಿದ್ದು ಹೆಮ್ಮೆಯ ಸಂಗತಿಯಾಗಿದೆ.ಅಷ್ಟೇ ಅಲ್ಲದೆ ತುಳು ,ಕನ್ನಡ ಸಿನಿಮಾದಲ್ಲಿ ಅಭಿನಯಿಸಿರುವ ಇವರು ಸುವರ್ಣದಲ್ಲಿ ಪ್ರಸಾರವಾಗುತ್ತಿದ್ದ ಶ್ ರಿಯಾಲಿಟಿ ಶೋ ನಲ್ಲೂ ಭಾಗವಹಿಸಿದ್ದಾರೆ. ಬಾಲಿವುಡ್ ತಾರೆಯರಾದ ಅನಿಲ್ ಕಪೂರ್, ಸುನಿಲ್ ಶೆಟ್ಟಿ ಯವರ ಜೊತೆ ಇಂಟರ್ ವ್ಯೂ ಮಾಡಿದ ಹೆಗ್ಗಳಿಕೆ ಇವರದ್ದಾಗಿದೆ. ಅಷ್ಟೆಅಲ್ಲ ಇವರ ಹಲವಾರು ಕವನ ಸಂಕಲನಗಳು ಬಿಡುಗಡೆಯಾಗಿದೆ.

ಪ್ರಸ್ತುತ ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರಿಗೆ ಪತಿ ರವಿ ಶಿವರಾಮ್ ಪ್ರತಿ ಹೆಜ್ಜೆಯಲ್ಲೂ ಪ್ರೋತ್ಸಾಹವನ್ನು ನೀಡುತ್ತಿದ್ದಾರೆ ಎನ್ನುತ್ತಾರೆ‌. ಅಲ್ಲದೆ ತಮ್ಮ ಸಂಬಳದಲ್ಲಿ ಒಂದಷ್ಟು ಪಾಲನ್ನು ವೃಧ್ದಾಶ್ರಮಕ್ಕೆ ನೀಡುತ್ತಿದ್ದು ಇದು ಇವರ ಸಮಾಜಪರ ಕಾಳಜಿಯನ್ನು ಪ್ರತಿನಿಧಿಸುತ್ತದೆ.

ಹೀಗೆ ಸಾಧನೆಯ ಹಾದಿಯಲಿ ಸಾಗುತ್ತಿರುವ ಅಂಚನ್ ಗೀತಾರವರ ಬದುಕು ಉಜ್ವಲವಾಗಲಿ ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂಬುದೇ ನಮ್ಮೆಲ್ಲರ ಆಶಯ.

Email us: billavaswarriors@gmail.com


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »