TOP STORIES:

ಸೋಲನ್ನು ಮೆಟ್ಟಿ ನಿಂತ ಸಾಧಕನ ಸ್ಫೂರ್ತಿಯ ಕಥೆ


ಜೀವನದಲ್ಲಿ ಸೋಲು ಮುಖ್ಯ ಅಲ್ಲ. ಆದರೆ ಸೋಲನ್ನು ಮೆಟ್ಟಿ ನಿಂತು ಸಾಧಿಸುವುದು ಮುಖ್ಯ. ಹೋಂಡಾ ಕಂಪೆನಿ ಅಂದರೆ ಎಲ್ಲರಿಗೂ ಚಿರಪರಿಚಿತ. ಈ ವಿಶ್ವವಿಖ್ಯಾತ ಕಂಪೆನಿಯ ಸ್ಥಾಪಕ ಸೋಯಿಚಿರೋ ಹೋಂಡಾರವರ ಕಲ್ಲು ಮುಳ್ಳಿನ ಹಾದಿಯ ಕಥೆಯೂ ನಮ್ಮೆಲ್ಲರ ಜೀವನಕ್ಕೆ ಸ್ಫೂರ್ತಿದಾಯಕವಾದುದು.

ಬಡ ಕುಟುಂಬದಲ್ಲಿ ಹುಟ್ಟಿದ ಸೋಯಿ ಚಿರೋ ಹೋಂಡಾ ಚಿಕ್ಕಂದಿನಿಂದಲೇ ಏನಾದರೂ ಸಾಧನೆ ಮಾಡಬೇಕು ಎನ್ನುವ ಅದಮ್ಯ ಬಯಕೆ ಇಟ್ಟುಕೊಂಡಿದ್ದರು. ಹಾಗೆಯೇ ಕಾಲೇಜಿನ ವರ್ಕ್‌ ಶಾಪ್‌ನಲ್ಲಿದ್ದಾಗ ಹಠಾತ್ತಾನೆ ಪಿಸ್ಟನ್‌ ತಯಾರಿಸುವ ಐಡಿಯಾ ಹೊಳೆಯಿತು.

ಹಗಲು-ರಾತ್ರಿ ಶ್ರಮಪಟ್ಟು ತಯಾರಿಸಿ ಟೊಯೊಟೊ ಕಂಪೆನಿಗೆ ಮಾರಲು ಹೋದಾಗ, ಗುಣ ಮಟ್ಟದ ಉತ್ಪನ್ನ ಇದಲ್ಲ ಎಂದು ಕಂಪೆನಿ ನಿರಾಕರಿಸಿತು. ಎಲ್ಲರೂ ಗೇಲಿ ಮಾಡಿ ನಕ್ಕರು. ಆದರೆ ಹೋಂಡಾ ಅವರು ಮಂದಹಾಸ ಬೀರಿ ತನ್ನ ಪ್ರಯತ್ನವನ್ನು ಮುಂದುವರಿಸಿದರು. ಮುಂದೊಂದು ದಿನ ತನ್ನ ಸತತ ಪ್ರಯತ್ನದಿಂದ ತನ್ನದೇ ಆದ ಫ್ಯಾಕ್ಟರಿಯನ್ನು ಆರಂಭಿಸಿದರು. ಆದರೆ ಭೂಕಂಪಕ್ಕೀಡಾಗಿ ಧರೆಗುರುಳಿತು.

ಮತ್ತೆ ಕಾರ್ಖಾನೆ ನಿರ್ಮಾಣಕ್ಕೆ ಮುಂದಾದಾಗ 2ನೇ ಮಹಾಯುದ್ಧವು ಪ್ರವೇಶಿಸಿಬಿಟ್ಟಿತ್ತು. ಆ ಹೊತ್ತಿಗೆ ಸಿಮೆಂಟಿನ ಪೂರೈಕೆ ನಿಂತೇ ಹೋಯ್ತು. ಆದರೆ ಇದಕ್ಕೆಲ್ಲ ತಲೆಕೆಡಿಸಿಕೊಳ್ಳದ ಹೋಂಡಾ ಅವರು ತಾನೆೇ ಸಿಮೆಂಟ್‌ ತಯಾರಿಸಿ ಕಾರ್ಖಾನೆಯ ಕೆಲಸ ಪೂರ್ಣಗೊಳಿಸಿದರು. ಹೀಗೆ ಮುಂದಿನ ದಿನಗಳಲ್ಲಿ ಹಲವು ಬಾರಿ ಸೋಲುಗಳನ್ನು ಕಂಡರೂ ಎಲ್ಲವನ್ನೂ ಮೆಟ್ಟಿನಿಂತು ಮುಂದೊಂದು ದಿನ ಹೋಂಡಾ ಕಂಪೆನಿಯನ್ನು ಜಗದ್ವಿಖ್ಯಾತ ಮಾಡಿದರು.

ನಾವು ಸೋಯಿಚಿರೋ ಹೋಂಡಾ ಅವರ ಜಾಗದಲ್ಲಿ ಇದ್ದಿದ್ದರೆ ಏನು ಮಾಡುತ್ತಿದ್ದೆವು? ಎಷ್ಟೇ ಸೋಲು ಕಂಡರೂ ಹೋಂಡಾ ಅವರು ಮಂದ ಹಾಸ ಬೀರಿ ಅದನ್ನೆಲ್ಲ ಜಯಿಸಿ ಮುನ್ನಡೆದು ಇಡೀ ವಿಶ್ವಕ್ಕೆ ಮಾದರಿ ಯಾದರು. ನಮಗೂ ಕೂಡ ಜೀವನದಲ್ಲಿ ಸೋಲುಗಳು ಬರುವುದು ಸಹಜ. ಆದರೆ ಅವನ್ನೆಲ್ಲ ಮೆಟ್ಟಿ ಮಂದಹಾಸ ಬೀರಿ ಜಯಿಸಬೇಕು ಅಷ್ಟೇ… ಎಲ್ಲದಕ್ಕೂ ಸಾಧಿಸುವ ಛಲವಿರಬೇಕು.

– ರಾಜೇಶ್ ಎಸ್ ಬಲ್ಯ


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »