TOP STORIES:

ಸೋಲನ್ನು ಮೆಟ್ಟಿ ನಿಂತ ಸಾಧಕನ ಸ್ಫೂರ್ತಿಯ ಕಥೆ


ಜೀವನದಲ್ಲಿ ಸೋಲು ಮುಖ್ಯ ಅಲ್ಲ. ಆದರೆ ಸೋಲನ್ನು ಮೆಟ್ಟಿ ನಿಂತು ಸಾಧಿಸುವುದು ಮುಖ್ಯ. ಹೋಂಡಾ ಕಂಪೆನಿ ಅಂದರೆ ಎಲ್ಲರಿಗೂ ಚಿರಪರಿಚಿತ. ಈ ವಿಶ್ವವಿಖ್ಯಾತ ಕಂಪೆನಿಯ ಸ್ಥಾಪಕ ಸೋಯಿಚಿರೋ ಹೋಂಡಾರವರ ಕಲ್ಲು ಮುಳ್ಳಿನ ಹಾದಿಯ ಕಥೆಯೂ ನಮ್ಮೆಲ್ಲರ ಜೀವನಕ್ಕೆ ಸ್ಫೂರ್ತಿದಾಯಕವಾದುದು.

ಬಡ ಕುಟುಂಬದಲ್ಲಿ ಹುಟ್ಟಿದ ಸೋಯಿ ಚಿರೋ ಹೋಂಡಾ ಚಿಕ್ಕಂದಿನಿಂದಲೇ ಏನಾದರೂ ಸಾಧನೆ ಮಾಡಬೇಕು ಎನ್ನುವ ಅದಮ್ಯ ಬಯಕೆ ಇಟ್ಟುಕೊಂಡಿದ್ದರು. ಹಾಗೆಯೇ ಕಾಲೇಜಿನ ವರ್ಕ್‌ ಶಾಪ್‌ನಲ್ಲಿದ್ದಾಗ ಹಠಾತ್ತಾನೆ ಪಿಸ್ಟನ್‌ ತಯಾರಿಸುವ ಐಡಿಯಾ ಹೊಳೆಯಿತು.

ಹಗಲು-ರಾತ್ರಿ ಶ್ರಮಪಟ್ಟು ತಯಾರಿಸಿ ಟೊಯೊಟೊ ಕಂಪೆನಿಗೆ ಮಾರಲು ಹೋದಾಗ, ಗುಣ ಮಟ್ಟದ ಉತ್ಪನ್ನ ಇದಲ್ಲ ಎಂದು ಕಂಪೆನಿ ನಿರಾಕರಿಸಿತು. ಎಲ್ಲರೂ ಗೇಲಿ ಮಾಡಿ ನಕ್ಕರು. ಆದರೆ ಹೋಂಡಾ ಅವರು ಮಂದಹಾಸ ಬೀರಿ ತನ್ನ ಪ್ರಯತ್ನವನ್ನು ಮುಂದುವರಿಸಿದರು. ಮುಂದೊಂದು ದಿನ ತನ್ನ ಸತತ ಪ್ರಯತ್ನದಿಂದ ತನ್ನದೇ ಆದ ಫ್ಯಾಕ್ಟರಿಯನ್ನು ಆರಂಭಿಸಿದರು. ಆದರೆ ಭೂಕಂಪಕ್ಕೀಡಾಗಿ ಧರೆಗುರುಳಿತು.

ಮತ್ತೆ ಕಾರ್ಖಾನೆ ನಿರ್ಮಾಣಕ್ಕೆ ಮುಂದಾದಾಗ 2ನೇ ಮಹಾಯುದ್ಧವು ಪ್ರವೇಶಿಸಿಬಿಟ್ಟಿತ್ತು. ಆ ಹೊತ್ತಿಗೆ ಸಿಮೆಂಟಿನ ಪೂರೈಕೆ ನಿಂತೇ ಹೋಯ್ತು. ಆದರೆ ಇದಕ್ಕೆಲ್ಲ ತಲೆಕೆಡಿಸಿಕೊಳ್ಳದ ಹೋಂಡಾ ಅವರು ತಾನೆೇ ಸಿಮೆಂಟ್‌ ತಯಾರಿಸಿ ಕಾರ್ಖಾನೆಯ ಕೆಲಸ ಪೂರ್ಣಗೊಳಿಸಿದರು. ಹೀಗೆ ಮುಂದಿನ ದಿನಗಳಲ್ಲಿ ಹಲವು ಬಾರಿ ಸೋಲುಗಳನ್ನು ಕಂಡರೂ ಎಲ್ಲವನ್ನೂ ಮೆಟ್ಟಿನಿಂತು ಮುಂದೊಂದು ದಿನ ಹೋಂಡಾ ಕಂಪೆನಿಯನ್ನು ಜಗದ್ವಿಖ್ಯಾತ ಮಾಡಿದರು.

ನಾವು ಸೋಯಿಚಿರೋ ಹೋಂಡಾ ಅವರ ಜಾಗದಲ್ಲಿ ಇದ್ದಿದ್ದರೆ ಏನು ಮಾಡುತ್ತಿದ್ದೆವು? ಎಷ್ಟೇ ಸೋಲು ಕಂಡರೂ ಹೋಂಡಾ ಅವರು ಮಂದ ಹಾಸ ಬೀರಿ ಅದನ್ನೆಲ್ಲ ಜಯಿಸಿ ಮುನ್ನಡೆದು ಇಡೀ ವಿಶ್ವಕ್ಕೆ ಮಾದರಿ ಯಾದರು. ನಮಗೂ ಕೂಡ ಜೀವನದಲ್ಲಿ ಸೋಲುಗಳು ಬರುವುದು ಸಹಜ. ಆದರೆ ಅವನ್ನೆಲ್ಲ ಮೆಟ್ಟಿ ಮಂದಹಾಸ ಬೀರಿ ಜಯಿಸಬೇಕು ಅಷ್ಟೇ… ಎಲ್ಲದಕ್ಕೂ ಸಾಧಿಸುವ ಛಲವಿರಬೇಕು.

– ರಾಜೇಶ್ ಎಸ್ ಬಲ್ಯ


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »