TOP STORIES:

FOLLOW US

ಹಿಂಜರಿಕೆಯಿಂದ ನಾನು ಹಿಂದೆ ಸರಿದಿದ್ದರೆ ನಟಿಯಾಗಬೇಕೆಂಬ ಆಸೆ ಆಸೆಯಾಗಿಯೇ ಉಳಿಯುತ್ತಿತ್ತು: ಶ್ರುತಿ ಆರ್ ಪೂಜಾರಿ


ಯಾವುದೇ ಕಲೆಯ ಬಗ್ಗೆ ಆಸಕ್ತಿಯಿದ್ದಾಗ ಅದನ್ನು ತಿಳಿಯಬೇಕು, ನಾನೂ ಹಾಗೆ ಆಗಬೇಕು, ಎನ್ನುವುದು ಮಾನವ ಸಹಜ ಗುಣ. ಆದರೆ ನಾನೂ ಅದರಲ್ಲಿ ತೊಡಗಬೇಕೆಂದರೆ ಅನುಭವದ ಪ್ರಶ್ನೆ ಕಾಡದಿರದು. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಹಿಂದೇಟು ಹಾಕುವುದನ್ನು ಪ್ರತಿ ರಂಗದಲ್ಲೂ ಕಾಣಸಿಗುತ್ತದೆ. ಕಿರುತೆರೆ, ಸಿನಿಮಾ ರಂಗದಲ್ಲಿ ರಂಗಭೂಮಿ, ನಟನೆ, ಮಾಡೆಲಿಂಗ್ ಕ್ಷೇತ್ರದ ಪರಿಚಯವಿದೆಯೇ ಎಂಬ ಪ್ರಶ್ನೆ ಮಾಮೂಲು.

ಅಂತೆಯೇ ಮನದ ಮೂಲೆಯಲ್ಲಿದ್ದ ನಟಿಯಾಗಬೇಕೆಂಬ ಸಣ್ಣ ಕನಸು ಕೋಸ್ಟಲ್ ವುಡ್ನ ‘ಎನ್ನ’ ಎಂಬ ತುಳು ಚಿತ್ರದ ನಾಯಕಿಯಾಗಿ ಆಯ್ಕೆಯಾಗುವುದರೊಂದಿಗೆ ನನಸಾಗಿ ಜನರಿಂದ ಪ್ರಶಂಸೆಗೆ ಪಾತ್ರರಾದವರೇ ಶ್ರುತಿ ಆರ್. ಪೂಜಾರಿ.

ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪದ ಅವರಾಲು ಮಟ್ಟು ಎಂಬ ಸಣ್ಣ ಗ್ರಾಮದ ರಮೇಶ್ ಪೂಜಾರಿ ಮತ್ತು ರೇವತಿ ಪೂಜಾರಿ ದಂಪತಿಗಳ ಪುತ್ರಿಯಾದ ಶ್ರುತಿಯವರು ಹುಟ್ಟೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪೂರೈಸಿ, ಪದವಿ ಶಿಕ್ಷಣವನ್ನು ಮುಲ್ಕಿಯ ವಿಜಯ ಕಾಲೇಜಿನಲ್ಲಿ ಮುಗಿಸಿದರು. ತದನಂತರ ಬೆಂಗಳೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭ ಬಿಡುವಿನ ವೇಳೆಯಲ್ಲಿ ತನ್ನದೇ ಫೋಟೋ ಶೂಟ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹಾಕಿ ಆ ಮೂಲಕ ಎಲ್ಲರ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ತನ್ನ ಹೊಸ ತುಳು ಚಿತ್ರದಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎನ್ನುವ ಹಂಬಲದಲ್ಲಿದ್ದ ನಿರ್ದೇಶಕ ವಿಶ್ವನಾಥ ಕೋಡಿಕಲ್ ರ ‘ಎನ್ನ’ ಚಿತ್ರದ ಅಡಿಷನ್ ನಡೆಯುತ್ತಿತ್ತು. ಅದರಲ್ಲಿ ಶ್ರುತಿಯವರು ಭಾಗವಹಿಸಿ ಕೊಟ್ಟ ಸಂಭಾಷಣೆಯನ್ನು ನಟನೆಯೊಂದಿಗೆ ಒಪ್ಪಿಸಿ ಚಿತ್ರದ ನಾಯಕಿಯಾಗಿ ಆಯ್ಕೆಯಾಗುತ್ತಾರೆ. ಅಲ್ಲಿ ಒಂದಷ್ಟು ಧೈರ್ಯ ಬಂದರೂ ನಟನೆ, ಸಂಭಾಷಣೆ, ಕ್ಯಾಮರ ಇದರ ಬಗೆಗೆ ಸರಿಯಾದ ಅನುಭವ ಇರದೆ ಭಯವಿತ್ತು. ಮುಂದೆ ಚಿತ್ರದ ಪೂರ್ವ ತಯಾರಿಯ ಹಂತದಲ್ಲಿ ಸಾಕಷ್ಟು ತರಬೇತಿ ಪಡೆದೆ ಜೊತೆಗೆ ಹೆಚ್ಚಿನವರು ಹೊಸಬರೇ ಆಗಿದ್ದರಿಂದ ಯಾವುದೇ ರೀತಿಯ ತೊಂದರೆಯಾಗದೆ ಉತ್ತಮವಾಗಿ ಅಭಿನಯಿಸಿದೆ ಎನ್ನುತ್ತಾರೆ‌.

ಹಿಂಜರಿಕೆಯಿಂದ ನಾನು ಹಿಂದೆ ಸರಿದಿದ್ದರೆ ಬಹುಷ: ನಟಿಯಾಗಬೇಕೆಂಬ ಆಸೆ ಆಸೆಯಾಗಿಯೇ ಉಳಿದಿತ್ತೇನೋ ಎನ್ನುವ ಅವರು ತನ್ನ ಬದುಕಿನಲ್ಲಿ ಬಂದ ಒಂದೊಳ್ಳೆ ಅವಕಾಶವನ್ನು ಸದುಪಯೋಗ ಪಡಿಸಿಕೊಂಡಿದ್ದೇನೆ ಎನ್ನುವ ತೃಪ್ತಿ ನನಗಿದೆ. ಮುಂದೆ ಉತ್ತಮ ಅವಕಾಶದ ನಿರೀಕ್ಷೆಯಲ್ಲಿದ್ದೇನೆ ಎನ್ನುತ್ತಾರೆ. ಇನ್ನಷ್ಟು ಅವಕಾಶಗಳು ಇವರಿಗೆ ಲಭಿಸಲಿ ಎಂದು ಹಾರೈಸುವ.

 


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »