TOP STORIES:

ಹಿಂಜರಿಕೆಯಿಂದ ನಾನು ಹಿಂದೆ ಸರಿದಿದ್ದರೆ ನಟಿಯಾಗಬೇಕೆಂಬ ಆಸೆ ಆಸೆಯಾಗಿಯೇ ಉಳಿಯುತ್ತಿತ್ತು: ಶ್ರುತಿ ಆರ್ ಪೂಜಾರಿ


ಯಾವುದೇ ಕಲೆಯ ಬಗ್ಗೆ ಆಸಕ್ತಿಯಿದ್ದಾಗ ಅದನ್ನು ತಿಳಿಯಬೇಕು, ನಾನೂ ಹಾಗೆ ಆಗಬೇಕು, ಎನ್ನುವುದು ಮಾನವ ಸಹಜ ಗುಣ. ಆದರೆ ನಾನೂ ಅದರಲ್ಲಿ ತೊಡಗಬೇಕೆಂದರೆ ಅನುಭವದ ಪ್ರಶ್ನೆ ಕಾಡದಿರದು. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಹಿಂದೇಟು ಹಾಕುವುದನ್ನು ಪ್ರತಿ ರಂಗದಲ್ಲೂ ಕಾಣಸಿಗುತ್ತದೆ. ಕಿರುತೆರೆ, ಸಿನಿಮಾ ರಂಗದಲ್ಲಿ ರಂಗಭೂಮಿ, ನಟನೆ, ಮಾಡೆಲಿಂಗ್ ಕ್ಷೇತ್ರದ ಪರಿಚಯವಿದೆಯೇ ಎಂಬ ಪ್ರಶ್ನೆ ಮಾಮೂಲು.

ಅಂತೆಯೇ ಮನದ ಮೂಲೆಯಲ್ಲಿದ್ದ ನಟಿಯಾಗಬೇಕೆಂಬ ಸಣ್ಣ ಕನಸು ಕೋಸ್ಟಲ್ ವುಡ್ನ ‘ಎನ್ನ’ ಎಂಬ ತುಳು ಚಿತ್ರದ ನಾಯಕಿಯಾಗಿ ಆಯ್ಕೆಯಾಗುವುದರೊಂದಿಗೆ ನನಸಾಗಿ ಜನರಿಂದ ಪ್ರಶಂಸೆಗೆ ಪಾತ್ರರಾದವರೇ ಶ್ರುತಿ ಆರ್. ಪೂಜಾರಿ.

ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪದ ಅವರಾಲು ಮಟ್ಟು ಎಂಬ ಸಣ್ಣ ಗ್ರಾಮದ ರಮೇಶ್ ಪೂಜಾರಿ ಮತ್ತು ರೇವತಿ ಪೂಜಾರಿ ದಂಪತಿಗಳ ಪುತ್ರಿಯಾದ ಶ್ರುತಿಯವರು ಹುಟ್ಟೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪೂರೈಸಿ, ಪದವಿ ಶಿಕ್ಷಣವನ್ನು ಮುಲ್ಕಿಯ ವಿಜಯ ಕಾಲೇಜಿನಲ್ಲಿ ಮುಗಿಸಿದರು. ತದನಂತರ ಬೆಂಗಳೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭ ಬಿಡುವಿನ ವೇಳೆಯಲ್ಲಿ ತನ್ನದೇ ಫೋಟೋ ಶೂಟ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹಾಕಿ ಆ ಮೂಲಕ ಎಲ್ಲರ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ತನ್ನ ಹೊಸ ತುಳು ಚಿತ್ರದಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎನ್ನುವ ಹಂಬಲದಲ್ಲಿದ್ದ ನಿರ್ದೇಶಕ ವಿಶ್ವನಾಥ ಕೋಡಿಕಲ್ ರ ‘ಎನ್ನ’ ಚಿತ್ರದ ಅಡಿಷನ್ ನಡೆಯುತ್ತಿತ್ತು. ಅದರಲ್ಲಿ ಶ್ರುತಿಯವರು ಭಾಗವಹಿಸಿ ಕೊಟ್ಟ ಸಂಭಾಷಣೆಯನ್ನು ನಟನೆಯೊಂದಿಗೆ ಒಪ್ಪಿಸಿ ಚಿತ್ರದ ನಾಯಕಿಯಾಗಿ ಆಯ್ಕೆಯಾಗುತ್ತಾರೆ. ಅಲ್ಲಿ ಒಂದಷ್ಟು ಧೈರ್ಯ ಬಂದರೂ ನಟನೆ, ಸಂಭಾಷಣೆ, ಕ್ಯಾಮರ ಇದರ ಬಗೆಗೆ ಸರಿಯಾದ ಅನುಭವ ಇರದೆ ಭಯವಿತ್ತು. ಮುಂದೆ ಚಿತ್ರದ ಪೂರ್ವ ತಯಾರಿಯ ಹಂತದಲ್ಲಿ ಸಾಕಷ್ಟು ತರಬೇತಿ ಪಡೆದೆ ಜೊತೆಗೆ ಹೆಚ್ಚಿನವರು ಹೊಸಬರೇ ಆಗಿದ್ದರಿಂದ ಯಾವುದೇ ರೀತಿಯ ತೊಂದರೆಯಾಗದೆ ಉತ್ತಮವಾಗಿ ಅಭಿನಯಿಸಿದೆ ಎನ್ನುತ್ತಾರೆ‌.

ಹಿಂಜರಿಕೆಯಿಂದ ನಾನು ಹಿಂದೆ ಸರಿದಿದ್ದರೆ ಬಹುಷ: ನಟಿಯಾಗಬೇಕೆಂಬ ಆಸೆ ಆಸೆಯಾಗಿಯೇ ಉಳಿದಿತ್ತೇನೋ ಎನ್ನುವ ಅವರು ತನ್ನ ಬದುಕಿನಲ್ಲಿ ಬಂದ ಒಂದೊಳ್ಳೆ ಅವಕಾಶವನ್ನು ಸದುಪಯೋಗ ಪಡಿಸಿಕೊಂಡಿದ್ದೇನೆ ಎನ್ನುವ ತೃಪ್ತಿ ನನಗಿದೆ. ಮುಂದೆ ಉತ್ತಮ ಅವಕಾಶದ ನಿರೀಕ್ಷೆಯಲ್ಲಿದ್ದೇನೆ ಎನ್ನುತ್ತಾರೆ. ಇನ್ನಷ್ಟು ಅವಕಾಶಗಳು ಇವರಿಗೆ ಲಭಿಸಲಿ ಎಂದು ಹಾರೈಸುವ.

 


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »