TOP STORIES:

” ಹಿಂದು ಮತ್ತು ಕ್ರೈಸ್ತರ ಸಾಮರಸ್ಯದ ಸಂಕೇತ ಶ್ರಿ ಮಂಗ್ಲಿಮಾರ್ ಅಣ್ಣಪ್ಪಪಂಜುರ್ಲಿ ದೈವಸ್ಥಾನ “


ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಮಂಗ್ಲಿಮಾರ್ ಶ್ರಿ ಅಣ್ಣಪ್ಪಪಂಜುರ್ಲಿ ದೈವಸ್ತಾನ ಹಿಂದು ಮತ್ತೂ ಕ್ರೈಸ್ತರ ನಡುವಿನ ಸಾಮರಸ್ಯದ ಕೊಂಡಿ ಯಾಗಿದೆ. ಹೌದು ಅಮ್ಟಾಡಿ ಗ್ರಾಮದ ಗ್ರಾಮ ದೈವ ಅಣ್ಣಪ್ಪ ಪಂಜುರ್ಲಿಯ ಗುಡಿ (ಸಾನ) ಕಟ್ಟಿಸಿದವರು ಅಗತ್ತಿಮಾರು ಸಾಲ್ವದೊರ್ ಕಾಮತ್ (ಸಾಲು ಕಂಬತ್ತಿ)ಮೂಲತಃ ಕ್ರೈಸ್ತಧರ್ಮದವರಾದ ಇವರು ಅಣ್ಣಪ್ಪ ಪಂಜುರ್ಲಿ ದೈವದ ಪರಮಭಕ್ತರು,ಇವರು ಆ ಕಾಲದಲ್ಲಿ ಆಗರ್ಭ ಶ್ರಿಮಂತರಗಿದ್ದರು, ವರ್ಷದಲ್ಲಿ 12 ಪೂಜೆಗಳನ್ನು ಇಗರ್ಜಿಯಲ್ಲಿ ಸಲ್ಲಿಸಿದರೆ ಅದಕ್ಕೂ ಮಿಗಿಲಾಗಿ 13 ನೇಮಗಳನ್ನು ಅಣ್ಣಪ್ಪನಿಗೆ ನೀಡುತಿದ್ದರು. ಇವರಿಗೆ ತುಳುನಾಡಿನ ಸತ್ಯ ದೈವವಾದ ಅಣ್ಣಪ್ಪ ಪಂಜುರ್ಲಿಯ ಮೇಲೆ ಈ ರೀತಿಯಾದ ನಂಬಿಕೆ, ಭಕ್ತಿ ಬರಲು ಒಂದು ಕಾರಣವಿದೆ.


ಬಹಳ ವರ್ಷಗಳ ಹಿಂದೆ ಇದೆ ಸಾಲು ಕಂಬತ್ತಿ ತನ್ನ ಗೆಳೆಯರೊಂದಿಗೆ ನಲ್ಕೆಮಾರ್ ಗೆ ಬಂದು ಸಾರಾಯಿ ಸೇವಿಸಿ,ಅಮಲೆರಿಸಿಕೊಂಡು ದೈವಸ್ತಾನದ ಕಡೆ ಬರುವುದು ವಾಡಿಕೆಯಾಗಿತ್ತು, ಅಪ್ಪಟ ಕ್ರೈಸ್ತನಾಗಿದ್ದ ಇವನಿಗೆ ಸ್ವಲ್ಪ ಸ್ವಧರ್ಮದ ಮೇಲೆ ಪ್ರೀತಿ, ಊರಿನಲ್ಲಿ ಶ್ರಿಮಂತನೆಂಬ ಅಹಂಕಾರ ಹಾಗೂ ಮದಿರೆಯ ಅಮಲಿನಲ್ಲಿ ದೈವಸ್ತಾನವನ್ನು ಅದರ ಸುತ್ತಮುತ್ತಲಿನ ಪ್ರದೇಶವನ್ನು ಅಶೌಚಗೊಳಿಸುತಿದ್ದನು, ಇದರಿಂದ ಬೇಸರಗೊಂಡ ಗ್ರಾಮಸ್ತರು ವರ್ಷದ ನೇಮದ ಸಮಯದಲ್ಲಿ ನೇರವಾಗಿ ಅಣ್ಣಪ್ಪನ ಬಳಿ ದೂರು ಕೊಟ್ಟರು ಅದಕ್ಕೆ ದೈವವು “ನಾನು ನಿಮಗೊಂದು ಉಪಾಯ ಹೇಳುತ್ತೇನೆ ಮುಂದಿನ ಅಮಾವಾಸ್ಯೆಯ ದಿನ ರಾತ್ರಿ ನೀವೆಲ್ಲರೂ ಒಟ್ಟು ಸೇರಿ ದೈವಸ್ತಾನ ಪ್ರಾಂಗಣದ ತುಂಬಾ ನೆಲ್ಲಿಕಾಯಿಯನ್ನು ಹರಡಿಬಿಡಿ ಮುಂದಿನದ್ದು ನಾನು ನೋಡಿಕೊಳ್ಳುತ್ತೆನೆ “ಎಂದು ಅಭಯದ ನುಡಿಯನ್ನು ಕೊಟ್ಟಿತು.

@beautyoftulunad
ಹಾಗೆ ಗ್ರಾಮಸ್ತರು ದೈವ ಹೇಳಿದಂತೆಯೆ ನಡೆದುಕೊಂಡರು, ಆ ಅಮಾವಾಸ್ಯೆಯ ದಿನ ಸಾಲು ಕಂಬತ್ತಿ ಸಾರಾಯಿಯ ನಶೆಯಲ್ಲಿ ದೈವಸ್ತಾನದ ಪ್ರಾಂಗಣಕ್ಕೆ ಬಂದಾಗ ಚೆಲ್ಲಿದ್ದ ನೆಲ್ಲಿಕಾಯಿಯ ಅರಿವಿಲ್ಲದೆ ಅದರ ಮೇಲೆ ಕಾಲಿಟ್ಟು ಜಾರಿ ಬಿಳುತ್ತಾನೆ, ಅವನು ನೆಲಕ್ಕೆ ಬಿಳುತಿದ್ದಂತೆಯೆ ಅಣ್ಣಪ್ಪ ಪಂಜುರ್ಲಿಯು ಆತನ ಕೊರಳನ್ನು ಅಮುಕಿ ಹಿಡಿಯುತ್ತದೆ ಇದನ್ನು ನೋಡಿದ ಆತನ ಹಿಂಬಾಲಕರು ಹೆದರಿ ಓಡಿ ಹೋಗುತ್ತಾರೆ, ಆಗ ಸಾಲು ಕಂಬತ್ತಿಯು “ಯಾರು ನೀನು ಎಂದು ಕೇಳುತ್ತಾನೆ, ನನಗೆ ಏನೂ ಮಾಡಬೇಡ, ನನ್ನನ್ನೂ ಬಿಟ್ಟುಬಿಡು ಎಂದು ಕೇಳಿಕೊಳ್ಳು ತ್ತಾನೆ ಆಗ ದೈವವು “ನಾನು ಅಣ್ಣಪ್ಪ ದೈವ, ನೀನು ನನ್ನ ಸನ್ನಿಧಾನವನ್ನು ಹಾಳುಮಾಡುತಿದ್ದಿ ಎಂದು ಕೋಪದಿಂದ ನುಡಿಯಿತು ಆಗ ಭಯಗೊಂಡ ಸಾಲು ಕಂಬತ್ತಿ “ನನ್ನನ್ನೂ ಬಿಟ್ಟುಬಿಡು, ನಿನಗೆ ಏನು ಬೇಕೆಂದು ಕೇಳು ನಾನು ಕೊಡುತ್ತೇನೆ, ನನ್ನ ಜೀವನ ಪರಿಯಂತ ನಿನ್ನ ಆರಾಧನೆಯನ್ನು ಮಾಡಿಕೊಂಡು ಬರುತ್ತೇನೆ, ನನ್ನನ್ನು ನಂಬು” ಎಂದು ಕೇಳಿಕೊಂಡ ನಂತರ ಆತನನ್ನು ಬಿಟ್ಟು ಮಾಯವಾಗಿ ಹೋಯಿತು.

@beautyoftulunad
ನಂತರ ಸಾಲು ಕಂಬತ್ತಿಯು ಚರ್ಚಿನ ಸ್ತಳದಲ್ಲಿ ಅಣ್ಣಪ್ಪನಿಗೆ ಗುಡಿಯನ್ನು ಕಟ್ಟಿ, ವರ್ಷಂಪ್ರತಿ ಅದ್ದೂರಿಯಿಂದ ನೇಮೊತ್ಸವವನ್ನು ಮಾಡಿ ಅಣ್ಣಪ್ಪನನ್ನು ಭಕ್ತಿಪೂರ್ವಕವಾಗಿ
ಆರಾಧಿಸಿಕೊಂಡು ಬಂದ, ಇದ್ದಕ್ಕೆಯೆ “ಭಯವೆ ಭಕ್ತಿಯ ಮೂಲವೆಂದು ಹಿರಿಯರು ಹೇಳಿರಬೇಕು. ಈ ವಿಷಯವು ಮೊಡಂಕಾಪು ಇಗರ್ಜಿಯವರಿಗೆ ತಲುಪಿತು, ಆದರೆ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿ ಇದ್ದರು, ಒಂದು ದಿನ ವಂದನಿಯ ಧರ್ಮ ಗುರುಗಳಾದ ಬಲ್ತಾಜಾರ್ ಅರಾನ್ಹಾ ಅವರು ಸಾಲು ಕಂಬತ್ತಿಯನ್ನು ಕರೆದು ದೇವರ ಸಮ್ಮುಖದಲ್ಲಿ ತಪ್ಪಿತಸ್ಥ, ಧರ್ಮ ಬಾಹಿರ ಕೆಲಸ ಮಾಡಿದವನು ಎಂದು ಹೇಳಿ ಒಂದು ಮಾತನ್ನು ಹೇಳಿದರು “ನೀನು ಸತ್ತರೆ ನರಕಕ್ಕೆ ಹೋಗುತ್ತಿ, ನಿನಗೆ ಸ್ವರ್ಗ ಸಿಗುವುದಿಲ್ಲ ಎಂದು ಹೇಳುತ್ತಾರೆ ಆಗ ಸಾಲು ಕಂಬತಿ ನಾನು ದೈವವನ್ನು ನಂಬುತ್ತೆನೆ, ಏಸುಸ್ವಾಮಿಯನ್ನು ನಂಬುತ್ತೆನೆ ನನ್ನ ಭಕ್ತಿ ಅಚಲ ಹಾಗಾಗಿ ನಾನು ಸತ್ತರೆ ಖಂಡಿತವಾಗಿ ಸ್ವರ್ಗಕ್ಕೆಹೋಗುತ್ತೇನೆ, ಇದರ ಗುರುತಾಗಿ ನಾನು ಸತ್ತದಿನ ಇಗರ್ಜಿಯ ಮುಖ್ಯದ್ವಾರದಲ್ಲಿ ನನ್ನ ಕೈಯ ಪಡಿಯಚ್ಚು ಮೂಡುತ್ತದೆ ಎಂದು ಹೇಳಿ ಹೋಗುತ್ತಾರೆ. @beautyoftulunad

“ಹಾಗೆಯೆ ಸಾಲು ಕಂಬತ್ತಿ ಸತ್ತ ದಿನ ಆತನ ಕೈಯ ಪಡಿಯಚ್ಚು ಮುಖ್ಯದ್ವಾರದಲ್ಲಿ ಇದ್ದದನ್ನು ಕಂಡ ಗುರುಗಳು ಅಚ್ಛರಿಗೊಂಡು ಸಾಲುಕಂಬತ್ತಿಗಾಗಿ ವಿಶೇಷ ಪೂಜೆ ಮಾಡಿದರು ಕೆಲವು ವರ್ಷಗಳ ಹಿಂದೆ ಆತನ ಕೈಯ ಗುರುತು ಮುಖ್ಯದ್ವಾರದಲ್ಲಿ ಕಾಣಸಿಗುತ್ತಿತ್ತು, ಇಗರ್ಜಿಯ ಪುನರ್ ನವೀಕರಣದ ನಂತರ ಈ ದ್ವಾರವನ್ನು ತೆರವುಗೊಳಿಸಿದ್ದಾರೆ. ಹಾಗಾಗಿ ಸಾಲು ಕಂಬತ್ತಿಯನ್ನು ಈಗಲೂ ದೈವ ವಲಸರಿ ನೇಮದ ಸಂಧರ್ಬ “ಸಾಲ್ ಕಂಬತ್ತಿ ಮಲ್ತಿನ ಕಟ್ಟ್ ಯನ್ನ “ಎಂದು ಆತನ ಭಕ್ತಿಯನ್ನು ಸ್ಮರಿಸುತ್ತದೆ. ಆಧಾರ ಗ್ರಂಥ: ” ಮಂಗ್ಲಿಮಾರ್ ಶ್ರಿ ಅಣ್ಣಪ್ಪ ಸ್ವಾಮಿ, ಜುಮಾದಿ ಬಂಟ ಪರಿವಾರ ದೈವಗಳು ನಡೆದು ಬಂದ ದಾರಿ ” ಬರಹ : ಫನಿಷ್ ಅಮ್ಟಾಡಿ

inputs: beauty of tulunad


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »