TOP STORIES:

” ಹಿಂದು ಮತ್ತು ಕ್ರೈಸ್ತರ ಸಾಮರಸ್ಯದ ಸಂಕೇತ ಶ್ರಿ ಮಂಗ್ಲಿಮಾರ್ ಅಣ್ಣಪ್ಪಪಂಜುರ್ಲಿ ದೈವಸ್ಥಾನ “


ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಮಂಗ್ಲಿಮಾರ್ ಶ್ರಿ ಅಣ್ಣಪ್ಪಪಂಜುರ್ಲಿ ದೈವಸ್ತಾನ ಹಿಂದು ಮತ್ತೂ ಕ್ರೈಸ್ತರ ನಡುವಿನ ಸಾಮರಸ್ಯದ ಕೊಂಡಿ ಯಾಗಿದೆ. ಹೌದು ಅಮ್ಟಾಡಿ ಗ್ರಾಮದ ಗ್ರಾಮ ದೈವ ಅಣ್ಣಪ್ಪ ಪಂಜುರ್ಲಿಯ ಗುಡಿ (ಸಾನ) ಕಟ್ಟಿಸಿದವರು ಅಗತ್ತಿಮಾರು ಸಾಲ್ವದೊರ್ ಕಾಮತ್ (ಸಾಲು ಕಂಬತ್ತಿ)ಮೂಲತಃ ಕ್ರೈಸ್ತಧರ್ಮದವರಾದ ಇವರು ಅಣ್ಣಪ್ಪ ಪಂಜುರ್ಲಿ ದೈವದ ಪರಮಭಕ್ತರು,ಇವರು ಆ ಕಾಲದಲ್ಲಿ ಆಗರ್ಭ ಶ್ರಿಮಂತರಗಿದ್ದರು, ವರ್ಷದಲ್ಲಿ 12 ಪೂಜೆಗಳನ್ನು ಇಗರ್ಜಿಯಲ್ಲಿ ಸಲ್ಲಿಸಿದರೆ ಅದಕ್ಕೂ ಮಿಗಿಲಾಗಿ 13 ನೇಮಗಳನ್ನು ಅಣ್ಣಪ್ಪನಿಗೆ ನೀಡುತಿದ್ದರು. ಇವರಿಗೆ ತುಳುನಾಡಿನ ಸತ್ಯ ದೈವವಾದ ಅಣ್ಣಪ್ಪ ಪಂಜುರ್ಲಿಯ ಮೇಲೆ ಈ ರೀತಿಯಾದ ನಂಬಿಕೆ, ಭಕ್ತಿ ಬರಲು ಒಂದು ಕಾರಣವಿದೆ.


ಬಹಳ ವರ್ಷಗಳ ಹಿಂದೆ ಇದೆ ಸಾಲು ಕಂಬತ್ತಿ ತನ್ನ ಗೆಳೆಯರೊಂದಿಗೆ ನಲ್ಕೆಮಾರ್ ಗೆ ಬಂದು ಸಾರಾಯಿ ಸೇವಿಸಿ,ಅಮಲೆರಿಸಿಕೊಂಡು ದೈವಸ್ತಾನದ ಕಡೆ ಬರುವುದು ವಾಡಿಕೆಯಾಗಿತ್ತು, ಅಪ್ಪಟ ಕ್ರೈಸ್ತನಾಗಿದ್ದ ಇವನಿಗೆ ಸ್ವಲ್ಪ ಸ್ವಧರ್ಮದ ಮೇಲೆ ಪ್ರೀತಿ, ಊರಿನಲ್ಲಿ ಶ್ರಿಮಂತನೆಂಬ ಅಹಂಕಾರ ಹಾಗೂ ಮದಿರೆಯ ಅಮಲಿನಲ್ಲಿ ದೈವಸ್ತಾನವನ್ನು ಅದರ ಸುತ್ತಮುತ್ತಲಿನ ಪ್ರದೇಶವನ್ನು ಅಶೌಚಗೊಳಿಸುತಿದ್ದನು, ಇದರಿಂದ ಬೇಸರಗೊಂಡ ಗ್ರಾಮಸ್ತರು ವರ್ಷದ ನೇಮದ ಸಮಯದಲ್ಲಿ ನೇರವಾಗಿ ಅಣ್ಣಪ್ಪನ ಬಳಿ ದೂರು ಕೊಟ್ಟರು ಅದಕ್ಕೆ ದೈವವು “ನಾನು ನಿಮಗೊಂದು ಉಪಾಯ ಹೇಳುತ್ತೇನೆ ಮುಂದಿನ ಅಮಾವಾಸ್ಯೆಯ ದಿನ ರಾತ್ರಿ ನೀವೆಲ್ಲರೂ ಒಟ್ಟು ಸೇರಿ ದೈವಸ್ತಾನ ಪ್ರಾಂಗಣದ ತುಂಬಾ ನೆಲ್ಲಿಕಾಯಿಯನ್ನು ಹರಡಿಬಿಡಿ ಮುಂದಿನದ್ದು ನಾನು ನೋಡಿಕೊಳ್ಳುತ್ತೆನೆ “ಎಂದು ಅಭಯದ ನುಡಿಯನ್ನು ಕೊಟ್ಟಿತು.

@beautyoftulunad
ಹಾಗೆ ಗ್ರಾಮಸ್ತರು ದೈವ ಹೇಳಿದಂತೆಯೆ ನಡೆದುಕೊಂಡರು, ಆ ಅಮಾವಾಸ್ಯೆಯ ದಿನ ಸಾಲು ಕಂಬತ್ತಿ ಸಾರಾಯಿಯ ನಶೆಯಲ್ಲಿ ದೈವಸ್ತಾನದ ಪ್ರಾಂಗಣಕ್ಕೆ ಬಂದಾಗ ಚೆಲ್ಲಿದ್ದ ನೆಲ್ಲಿಕಾಯಿಯ ಅರಿವಿಲ್ಲದೆ ಅದರ ಮೇಲೆ ಕಾಲಿಟ್ಟು ಜಾರಿ ಬಿಳುತ್ತಾನೆ, ಅವನು ನೆಲಕ್ಕೆ ಬಿಳುತಿದ್ದಂತೆಯೆ ಅಣ್ಣಪ್ಪ ಪಂಜುರ್ಲಿಯು ಆತನ ಕೊರಳನ್ನು ಅಮುಕಿ ಹಿಡಿಯುತ್ತದೆ ಇದನ್ನು ನೋಡಿದ ಆತನ ಹಿಂಬಾಲಕರು ಹೆದರಿ ಓಡಿ ಹೋಗುತ್ತಾರೆ, ಆಗ ಸಾಲು ಕಂಬತ್ತಿಯು “ಯಾರು ನೀನು ಎಂದು ಕೇಳುತ್ತಾನೆ, ನನಗೆ ಏನೂ ಮಾಡಬೇಡ, ನನ್ನನ್ನೂ ಬಿಟ್ಟುಬಿಡು ಎಂದು ಕೇಳಿಕೊಳ್ಳು ತ್ತಾನೆ ಆಗ ದೈವವು “ನಾನು ಅಣ್ಣಪ್ಪ ದೈವ, ನೀನು ನನ್ನ ಸನ್ನಿಧಾನವನ್ನು ಹಾಳುಮಾಡುತಿದ್ದಿ ಎಂದು ಕೋಪದಿಂದ ನುಡಿಯಿತು ಆಗ ಭಯಗೊಂಡ ಸಾಲು ಕಂಬತ್ತಿ “ನನ್ನನ್ನೂ ಬಿಟ್ಟುಬಿಡು, ನಿನಗೆ ಏನು ಬೇಕೆಂದು ಕೇಳು ನಾನು ಕೊಡುತ್ತೇನೆ, ನನ್ನ ಜೀವನ ಪರಿಯಂತ ನಿನ್ನ ಆರಾಧನೆಯನ್ನು ಮಾಡಿಕೊಂಡು ಬರುತ್ತೇನೆ, ನನ್ನನ್ನು ನಂಬು” ಎಂದು ಕೇಳಿಕೊಂಡ ನಂತರ ಆತನನ್ನು ಬಿಟ್ಟು ಮಾಯವಾಗಿ ಹೋಯಿತು.

@beautyoftulunad
ನಂತರ ಸಾಲು ಕಂಬತ್ತಿಯು ಚರ್ಚಿನ ಸ್ತಳದಲ್ಲಿ ಅಣ್ಣಪ್ಪನಿಗೆ ಗುಡಿಯನ್ನು ಕಟ್ಟಿ, ವರ್ಷಂಪ್ರತಿ ಅದ್ದೂರಿಯಿಂದ ನೇಮೊತ್ಸವವನ್ನು ಮಾಡಿ ಅಣ್ಣಪ್ಪನನ್ನು ಭಕ್ತಿಪೂರ್ವಕವಾಗಿ
ಆರಾಧಿಸಿಕೊಂಡು ಬಂದ, ಇದ್ದಕ್ಕೆಯೆ “ಭಯವೆ ಭಕ್ತಿಯ ಮೂಲವೆಂದು ಹಿರಿಯರು ಹೇಳಿರಬೇಕು. ಈ ವಿಷಯವು ಮೊಡಂಕಾಪು ಇಗರ್ಜಿಯವರಿಗೆ ತಲುಪಿತು, ಆದರೆ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿ ಇದ್ದರು, ಒಂದು ದಿನ ವಂದನಿಯ ಧರ್ಮ ಗುರುಗಳಾದ ಬಲ್ತಾಜಾರ್ ಅರಾನ್ಹಾ ಅವರು ಸಾಲು ಕಂಬತ್ತಿಯನ್ನು ಕರೆದು ದೇವರ ಸಮ್ಮುಖದಲ್ಲಿ ತಪ್ಪಿತಸ್ಥ, ಧರ್ಮ ಬಾಹಿರ ಕೆಲಸ ಮಾಡಿದವನು ಎಂದು ಹೇಳಿ ಒಂದು ಮಾತನ್ನು ಹೇಳಿದರು “ನೀನು ಸತ್ತರೆ ನರಕಕ್ಕೆ ಹೋಗುತ್ತಿ, ನಿನಗೆ ಸ್ವರ್ಗ ಸಿಗುವುದಿಲ್ಲ ಎಂದು ಹೇಳುತ್ತಾರೆ ಆಗ ಸಾಲು ಕಂಬತಿ ನಾನು ದೈವವನ್ನು ನಂಬುತ್ತೆನೆ, ಏಸುಸ್ವಾಮಿಯನ್ನು ನಂಬುತ್ತೆನೆ ನನ್ನ ಭಕ್ತಿ ಅಚಲ ಹಾಗಾಗಿ ನಾನು ಸತ್ತರೆ ಖಂಡಿತವಾಗಿ ಸ್ವರ್ಗಕ್ಕೆಹೋಗುತ್ತೇನೆ, ಇದರ ಗುರುತಾಗಿ ನಾನು ಸತ್ತದಿನ ಇಗರ್ಜಿಯ ಮುಖ್ಯದ್ವಾರದಲ್ಲಿ ನನ್ನ ಕೈಯ ಪಡಿಯಚ್ಚು ಮೂಡುತ್ತದೆ ಎಂದು ಹೇಳಿ ಹೋಗುತ್ತಾರೆ. @beautyoftulunad

“ಹಾಗೆಯೆ ಸಾಲು ಕಂಬತ್ತಿ ಸತ್ತ ದಿನ ಆತನ ಕೈಯ ಪಡಿಯಚ್ಚು ಮುಖ್ಯದ್ವಾರದಲ್ಲಿ ಇದ್ದದನ್ನು ಕಂಡ ಗುರುಗಳು ಅಚ್ಛರಿಗೊಂಡು ಸಾಲುಕಂಬತ್ತಿಗಾಗಿ ವಿಶೇಷ ಪೂಜೆ ಮಾಡಿದರು ಕೆಲವು ವರ್ಷಗಳ ಹಿಂದೆ ಆತನ ಕೈಯ ಗುರುತು ಮುಖ್ಯದ್ವಾರದಲ್ಲಿ ಕಾಣಸಿಗುತ್ತಿತ್ತು, ಇಗರ್ಜಿಯ ಪುನರ್ ನವೀಕರಣದ ನಂತರ ಈ ದ್ವಾರವನ್ನು ತೆರವುಗೊಳಿಸಿದ್ದಾರೆ. ಹಾಗಾಗಿ ಸಾಲು ಕಂಬತ್ತಿಯನ್ನು ಈಗಲೂ ದೈವ ವಲಸರಿ ನೇಮದ ಸಂಧರ್ಬ “ಸಾಲ್ ಕಂಬತ್ತಿ ಮಲ್ತಿನ ಕಟ್ಟ್ ಯನ್ನ “ಎಂದು ಆತನ ಭಕ್ತಿಯನ್ನು ಸ್ಮರಿಸುತ್ತದೆ. ಆಧಾರ ಗ್ರಂಥ: ” ಮಂಗ್ಲಿಮಾರ್ ಶ್ರಿ ಅಣ್ಣಪ್ಪ ಸ್ವಾಮಿ, ಜುಮಾದಿ ಬಂಟ ಪರಿವಾರ ದೈವಗಳು ನಡೆದು ಬಂದ ದಾರಿ ” ಬರಹ : ಫನಿಷ್ ಅಮ್ಟಾಡಿ

inputs: beauty of tulunad


Related Posts

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »