TOP STORIES:

FOLLOW US

ಹೆಣ್ಣು ಕೂಡ ಒಂದು ಜೀವಿ ಎಂಬುವುದನ್ನು ಇಂದಿನ ಸಮಾಜ ಮರೆತಿದೆಯೇ ?


ಹೆಣ್ಣು
“ಯತ್ರ ನಾರ್ಯಸ್ತು ಪೂಜೆಯಂತೇ ತತ್ರ ದೇವತಾ”: ಅಂದರೆ “ಎಲ್ಲಿ ಹೆಣ್ಣನ್ನು ಪೂಜೆಸುತ್ತಾರೋ ಅಲ್ಲಿ ಸಕಲ ದೇವತೆಗಳು ನೆಲೆಸುತ್ತಾರೆ” ಆದರೆ ಬೇಸರದ ಸಂಗತಿಯೆಂದರೆ ಈ ೨೧ನೆಯ ಶತಮಾನದಲ್ಲಿ ಈ ಅರ್ಥ ಅಕ್ಷರಶ: ಸುಳ್ಳುಯೆನಿಸುತ್ತಿದೆ.

ಹೆಣ್ಣನ್ನು ಪೂಜೆಮಾಡುವುದು ಬೇಡ ಕನಿಷ್ಟ ಪಕ್ಷ ಅವಳು ಒಂದು ಜೀವಿ ,ಅವಳಿಗೂ ಈ ಭೂಮಿಯಲ್ಲಿ ಅವಳ ಇಚ್ಛೆಯಂತೇ ಬದುಕಲು ಬಿಟ್ಟರೆ ಸಾಕು..

‘ಹೆಣ್ಣು ‘ಒಬ್ಬಳು ಗಂಡಿನಂತೆ ಒಂದು ಜೀವಿ ,ಅವಳಿಗೂ ಮನಸ್ಸು ,ಭಾವನೆಗಳಿವೆ,ಅವಳು ಕೇವಲ ಉಸಿರಾಡುವ ಬೊಂಬೆಯಲ್ಲ ,ಅವಳಿಗೂ ಗಂಡಿನಂತೆ ಜೀವವಿದೆ . ಇದೆನ್ನೆಲ್ಲ ಮರೆತಂತಿದೆ ಗಂಡುಕುಲ . ‘ಹೆಣ್ಣು ‘ಅಂದರೆ ಕೇವಲ ನಿಮ್ಮ ಕಾಮದ ಬಯಕೆಗಳನ್ನ ತೀರಿಸುವ ಒಂದು ಯಂತ್ರವಾಗಿ ಕಾಣುತ್ತಾಳ ? ಮತ್ತೇಕೆ..ಅವಳ ಮೇಲಿನ ದೌರ್ಜನ್ಯ ,ಅತ್ಯಾಚಾರ, ಹಿಂಸೆ ಇನ್ನು ನಿಂತಿಲ್ಲ ..ಹೆಣ್ಣನ್ನು ಅಪಹರಿಸಿದಕ್ಕೆ ,ಹೆಣ್ಣಿನ ಮಾನಭಂಗ ಮಾಡಿದ್ದಕ್ಕೆ ರಾಮಾಯಣ ,ಮಹಾಭಾರತ ಎನ್ನುವ ಮಹಾಸಂಗ್ರಾಮವೇ ನಡೆದುಹೋಯಿತು. ಆದರೆ ಇಂದು ಹೆಣ್ಣಿನ ಮೇಲೆ ಅದೆಷ್ಟೋ ದೌರ್ಜನ್ಯ, ಅತ್ಯಾಚಾರಗಳು ನಡಿದಿದೆ ನಡೆಯುತ್ತಿದೆ . ಯಾಕಂದ್ರೆ ಅವಳು ‘ಹೆಣ್ಣು’ ಎನ್ನುವ ಕಾರಣವೆ??

   (Copyrights owned by: billavaswarriors.com )

ಒಂದೇ ರಾತ್ರಿಯಲ್ಲಿ ನೋಟ್ ಬ್ಯಾನ್ ಆಗುತ್ತೆ , ಒಂದೇ ರಾತ್ರಿಯಲ್ಲಿ ಸರಕಾರ ಬದಲಾಗುತ್ತೆ ,ಒಂದೇ ದಿನದಲ್ಲಿ ಎಲ್ಲ ಚೈನೀಸ್ ಆಪ್ ಟಿವಿ ಚಾನೆಲ್ ಬ್ಯಾನ್ ಆಗುತ್ತೆ ,ಆದರೆ ಯಾಕೆ ??ವ್ಯಾಘ್ರ ಕಾಮುಕರಿಗೆ ಶಿಕ್ಷೆ ಆಗುದಿಲ್ಲ. ಯಾಕಂದ್ರೆ ಒಂದೇ ಉತ್ತರ ಅವಳು ‘ಹೆಣ್ಣು’ ಅಲ್ಲವೇ.?

ಇಂದು ಮನುಷ್ಯ ಕಾಲಿಡದ ಕ್ಷೇತ್ರವಿಲ್ಲ . ಭೂಮಿಯಲ್ಲಿ ಮಾತ್ರವಲ್ಲದೆ ಹೊಸಜಗತ್ತನ್ನು ಹುಡುಕುತ್ತ ಆಕಾಶಕ್ಕೆ ಹಾರಿದ್ದಾನೆ . ಹಲವಾರು ಅಮೋಘ ಸಾಧನೆ ಮಾಡಿದ್ದಾನೆ. ಆದರೆ ಹೆಣ್ಣಿನ ಮೇಲಿನ ಅತ್ಯಾಚಾರಗಳು ನಡೆಯುತ್ತಲೇ ಇದೆ ಕಾರಣ ಅವಳು ‘ಹೆಣ್ಣು’…

ಗಂಡುಜಾತಿಯ ರಣಹೇಡಿಗಳೇ, ವ್ಯಾಘ್ರಕಾಮುಕರೇ ..ಯಾಕೆ ನಿಮಗೆ ಇನ್ನು ಅರ್ಥವಾಗುತ್ತಿಲ್ಲ ನಿಮಗೆ ಪ್ರೀತಿ ಕೊಟ್ಟು ನಿಮ್ಮನ್ನು ಒಂಭತ್ತು ತಿಂಗಳು ಸಾಕಿ ಸಲುಹಿದ ಆ ನಿಮ್ಮ ತಾಯಿಯು ಒಬ್ಬಳು ಹೆಣ್ಣಲ್ಲವೇ . ಅವಳು (ಹೆಣ್ಣು ) ಹುಟ್ಟುವಾಗ ಅಣ್ಣ- ತಮ್ಮ ಎನ್ನುವ ಪಟ್ಟಕಟ್ಟಿ ನಿಮಗೆ ಪ್ರೀತಿ ,ಸಂತೋಷ ನೀಡುವ ಅಕ್ಕ -ತಂಗಿ ಸ್ವರೂಪವಲ್ಲವೇ ಹೆಣ್ಣು ..

ಕೊನೆ ಪಕ್ಷ ನಿಮಗೆ ಹೆಣ್ಣಿಗೆ ತಾಯಿ ,ಅಕ್ಕ ,ತಂಗಿ ಸ್ಥಾನ ನೀಡಲು ಕಷ್ಟವಾದರೇ ಬಿಡಿ..ಕನಿಷ್ಟ ಪಕ್ಷ ಅವಳು ನಿಮ್ಮಂತೆಹೇ ಮನುಷ್ಯಳು ಅವಳಿಗೂ ಒಂದು ಜೀವವಿದೆ, ಜೀವನವಿದೆ..ಸಾವಿರಾರು ಬಣ್ಣ- ಬಣ್ಣದ ಕನಸುಗಳಿವೆ ,ಆ ಕನಸುಗಳಿಗೆ ಬಣ್ಣ ಹಚ್ಚುವ ಕೆಲಸಮಾಡದಿದ್ದರು ಪರವಾಗಿಲ್ಲ ಅವಳ ರೆಕ್ಕೆ ಕತ್ತರಿಸುವ ಕೆಲಸಮಾಡದಿರು ಮನುಜ…

ಒಮ್ಮೆ ಮನುಜನಾಗು ..ಹೆಣ್ಣನ್ನು ಕೆಟ್ಟ ದ್ರಷ್ಟಿಯಿಂದ ನೋಡುವುದನ್ನು ನಿಲ್ಲಿಸು ..ಈ ಮನುಷ್ಯ ಜನುಮದಲ್ಲಿ ಮಾನವನಾಗಿ ಬಾಳು .

“ನಮ್ಮ ರಾಷ್ಟ್ರಪಿತ ಮಹಾತ್ಮಾ ಗಾಂಧಿ “ಈ ರೀತಿ ಹೇಳಿದ್ದಾರೆ “ಮಧ್ಯರಾತ್ರಿ ೧೨ಗಂಟೆಗೆ ಹೆಣ್ಣು ಹೊರಗಡೆ ಹೋಗಿ ಮನೆಗೆ ಸುರಕ್ಷಿತವಾಗಿ ಹಿಂತಿರುಗಿ ಬಂದರೆ ಆ ದಿನ ನಮಗೆ ಸ್ವಾತಂತ್ರಾ ಸಿಕ್ಕಿದೆ ಎಂದರ್ಥ”.ಒಮ್ಮೆ ಈ ಪ್ರಶ್ನೆಯನ್ನು ಮನದಲ್ಲಿ ಕೇಳಿ ನೋಡಿ ಉತ್ತರ ಪ್ರಶ್ನೆಯಾಗಿಯೇ ಉಳಿದುಬಿಡುತ್ತೆ
ಅಲ್ಲವೇ.. ಸಾಧ್ಯವಾದರೆ ಮಾತ್ರ ಮಾತ್ರ .. ಹೆಣ್ಣಿಗೆ ನಿಮ್ಮ ಬೆಂಬಲ ಸಹಾಯ ನೀಡಿ ಅದು ಬಿಟ್ಟು ಅವಳ ಮಾನಹರಣ ಮಾಡದಿರಿ ಅವಳ ಮೇಲಿನ ಅತ್ಯಾಚಾರ ನಿಲ್ಲುವ ನಿಟ್ಟಿಗೆ ಒಂದು ಪ್ರಯತ್ನ ಮಾಡಿ..ಅದು ಬಿಟ್ಟು ಅವಳ ದೌರ್ಜನ್ಯ ಮಾಡದಿರು, ಇಲ್ಲದಿದ್ದರೆ ಕೇಳು ಮನುಜ ಕಾಲ ಪಾಠ ಕಲಿಸಲು ಒಂದೊಂದು ಹೆಜ್ಜೆ ಮುಂದೆ ಇಟ್ಟಿದೆ ಪ್ರವಾಹ ,ಕರೋನ ಭೂಕಂಪ, ಪ್ರಕೃತಿ ವಿಕೋಪಗಳಿಂದ ಪಾಠ ಕಲಿಯದೇ ನೀ ಗೆದ್ದೇ ಎಂದು ಬೀಗಬೇಡ
ಮನುಜ…ಬೀಗಬೇಡ..ಕಾಲದಯೆದುರು ನೀ ತೃಣ ಸಮಾನವೆಂದು ನೆನಪಿಟ್ಟುಕೋ. ಇನ್ನಾದರೂ ಎಚ್ಚೆತ್ತಿಕೊ ಇಲ್ಲವಾದ್ರೆ ಕಾಲದ ಉಗ್ರರೂಪವ ಸಹಿಸುವ ಶಕ್ತಿ ನಿನ್ನಲ್ಲಿ ಇನ್ನು ಉಳಿದಿಲ್ಲ ಮನುಜ …ನೀ ಬದಲಾಗು ..ನೀ ಮನುಷ್ಯನಾಗಿ ಬದಲಾಗು..ಇನ್ನು ಬದಲಾಗದಿದ್ದರೆ ಕಾಲದ ಎದುರು ಸುಟ್ಟು ಭಸ್ಮವಾಗಿಬಿಡುತ್ತೀಯ.ಕಾಲ ತನ್ನ ಉಗ್ರರೂಪ ತೋರಿಸುವ ಸಮಯ ಬಹಳ ಹತ್ತಿರದಲ್ಲಿದೆ .

ರಮ್ಯಾ ಸಾಲಿಯಾನ್
ಬೋರುಗುಡ್ಡೆ, ಮೂಡಬಿದ್ರೆ

   (Copyrights owned by: billavaswarriors.com )


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »