TOP STORIES:

ಹೆದ್ದಾರಿಯಲ್ಲಿ ಕಸ ಸುರಿಯುವ ಅನಾಗರಿಕರಿಗೆ ಬೋಧನೆ ಮಾಡುವ ನಾಗರಾಜ್ ಬಜಾಲ್


ಇತ್ತೀಚೆಗೆ ಕೆಲವು ದಿನಗಳಿಂದ ಅಡ್ಯಾರ್ ಕಟ್ಟೆಯಿಂದ ಕಣ್ಣೂರು ಮಸೀದಿ ವರೆಗಿನ ಹೆದ್ದಾರಿ ಬದಿಯಲ್ಲಿ ಕೊಳೆತು ನಾರುವ ಕಸದರಾಶಿಯನ್ನು ನೋಡಿ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಕಾರಿನಲ್ಲಿ ಮತ್ತು ರಿಕ್ಷಾದಲ್ಲಿ ಬರುವ ಹಲವರುಬೆಳಿಗ್ಗೆ ಕಸದ ಚೀಲಗಳನ್ನು ಇಲ್ಲಿ ಎಸೆದು ಹೋಗುತ್ತಿದ್ದರು. ಬಗ್ಗೆ ಸರ್ಕಾರದವರಾಗಲೀ ಸಂಬಂಧಿಸಿದ ಪಂಚಾಯತ್ ನವರಾಗಲೀಸ್ವಲ್ಪವೂ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ.

     ಆದರೆ ಇತ್ತೀಚೆಗೆ ಕೆಲವು ದಿನಗಳಿಂದ ಪರಿಸರದ ಬಗ್ಗೆ ಕಾಳಜಿ ಹೊಂದಿರುವ ಬಜಾಲ್ ನಾಗರಾಜ್ ಎಂಬವರು ತಾನುಏನಾದರೂ ಮಾಡಬೇಕೆಂಬ ಛಲದಿಂದ ಪ್ರತಿದಿನ ಬೆಳಿಗ್ಗೆ ಕೈಯಲ್ಲಿ ಒಂದು ಬೋರ್ಡ್ ಹಿಡಿದು ಕೊಂಡು, ‘ *ರಸ್ತೆ ಬದಿ ಕಸಎಸೆಯಬೇಡಿ ‘* , ಹತ್ತಿರದಲ್ಲೇ ನೇತ್ರಾವತಿ ನದಿ ಇದೆ. ಕಸ ನೀರಿನೊಂದಿಗೆ ನದಿ ಸೇರಿ ನೀರು ಕಲುಷಿತಗೊಳ್ಳುತ್ತಿದೆ.. ಎಂಬಫಲಕವನ್ನು ಹಿಡಿದು , ಕಸ ಎಸೆಯುವ ಅನಾಗರಿಕರಿಗೆ ಪಾಠ ಬೋಧನೆ ಮಾಡುತ್ತಿದ್ದಾರೆ. ಇದರಿಂದ ಕೆಲವು ದಿನಗಳಿಂದ ಕಸಬೀಳುವುದು ಕಡಿಮೆ ಆಗಿದೆ. ಪರಿಸರದ ಬಗೆಗಿನ ಇವರ ಕಾಳಜಿ, ಸಮಾಜ ಸೇವೆಯ ಕುರಿತು ಕಳಕಳಿ ನಿಜಕ್ಕೂ ಅಭಿನಂದನೀಯ.  ಅಡ್ಯಾರ್ ಮಾಧವ ನಾಯ್ಕ್ ಹಾಗೂ ಶೇಖರ್ ಶೆಟ್ಟಿಯವರು ಸಂದರ್ಭದಲ್ಲಿ ಅವರನ್ನು ಮಾತನಾಡಿಸಿ ಅಭಿನಂದಿಸಿದ್ದಾರೆ.

ಶ್ರೀಯುತ ನಾಗರಾಜ್ ಬಜಾಲ್ ಇವರ ಸೇವಾ ಕಾರ್ಯಕ್ಕೆ ನಾವೂ ಭೇಷ್ ಎನ್ನೋಣವೇ ..?


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »